ಮೈಸೂರು

ಕಬಿನಿ ಜಲಾಶಯದಲ್ಲಿ ಮತ್ತೆ ಹೆಚ್ಚಾದ ಹೊರಹರಿವು

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಏರಿಕೆ ಮಾಡಲಾಗಿದೆ.

ಕೇರಳದ ವಯನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಏರಿಕೆ ಮಾಡಲಾಗಿದೆ.

ಜಲಾಶಯದ ಇಂದಿನ ಒಳಹರಿವು 17,000 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 25,000 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ. ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 82 ಅಡಿಗಳಾಗಿದೆ.

ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಹೊರಹರಿವನ್ನು 25,000 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದ್ದು, ಕಪಿಲಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ  ಜನರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷತೆಯಿಂದ ಇರಬೇಕು. ಜಲಾಶಯದಿಂದ ಇನ್ನೂ ಹೆಚ್ಚಿನ ನೀರನ್ನು ಬಿಟ್ಟರೆ ತಮ್ಮ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ತನ್ನ ರೌದ್ರಾವತಾರ ತಾಳಿದ್ದು, ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಪ್ರವಾಹ ಭೀತಿ ಎದುರಾಗುವ ಸಂಭವವಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

22 mins ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

49 mins ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

1 hour ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

4 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

5 hours ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

5 hours ago