ಮೈಸೂರು

ಕೇರಳದ ವಯನಾಡಿನಲ್ಲಿ ಭಾರೀ ಮಳೆ; ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಹೆಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.

ಕಳೆದ ಮೂರು ದಿನಗಳಿಂದ ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕಬಿನಿ ಜಲಾಶಯ ಭರ್ತಿಯತ್ತ ಸಾಗಿದೆ. ಜಲಾಶಯದ ಇಂದಿನ ಒಳಹರಿವು 6 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 1000 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ.

ಮುಂಗಾರು ಶುರುವಾದ ನಂತರದಲ್ಲಿ ಮೊದಲ ಬಾರಿಗೆ ಜಲಾಶಯದ ಒಳಹರಿವು ಈ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ.

84 ಅಡಿ ಸಾಮರ್ಥ್ಯವಿರುವ ಜಲಾಶಯದ ಇಂದಿನ ನೀರಿನ ಮಟ್ಟ 66.27 ಅಡಿಗಳಾಗಿದೆ. ನಿನ್ನೆ ಒಂದೇ ದಿನ 1.5 ಅಡಿಗಳು ಹೆಚ್ಚಳವಾಗಿದ್ದು, ಜಲಾಶಯದಿಂದ 1000 ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗುತ್ತಿದೆ.

ಮುಂಗಾರು ಮಳೆ ಹೀಗೇಯೇ ಮುಂದುವರಿದರೆ ಜಲಾಶಯ ಇನ್ನು 8 ದಿನಗಳ ಒಳಗಾಗಿ ಸಂಪೂರ್ಣ ಭರ್ತಿಯಾಗಲಿದೆ ಎನ್ನಲಾಗಿದ್ದು, ಯಾವುದೇ ಕ್ಷಣಗಳಲ್ಲಾದರೂ ಡ್ಯಾಂನಿಂದ ಕಪಿಲಾ ನದಿಗೆ ನೀರನ್ನು ಬಿಡುಗಡೆ ಮಾಡಲಾಗುತ್ತದೆ.

ಜಲಾಶಯದಿಂದ ಹೆಚ್ಚಿನ ನೀರನ್ನು ಬಿಡುಗಡೆ ಮಾಡುವುದರಿಂದ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳು ಜಲಾವೃತವಾಗಲಿವೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಸುಪ್ರೀಂನಲ್ಲೂ ಬಿಗ್‌ ಶಾಕ್‌

ನವದೆಹಲಿ: ರೌಡಿಶೀಟರ್‌ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…

17 mins ago

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

1 hour ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

1 hour ago

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…

1 hour ago

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

2 hours ago

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

7 hours ago