ಹೆಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.
ಕಳೆದ ಮೂರು ದಿನಗಳಿಂದ ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕಬಿನಿ ಜಲಾಶಯ ಭರ್ತಿಯತ್ತ ಸಾಗಿದೆ. ಜಲಾಶಯದ ಇಂದಿನ ಒಳಹರಿವು 6 ಸಾವಿರ ಕ್ಯೂಸೆಕ್ಸ್ಗಳಾಗಿದ್ದು, ಹೊರಹರಿವನ್ನು 1000 ಕ್ಯೂಸೆಕ್ಸ್ಗಳಿಗೆ ಏರಿಕೆ ಮಾಡಲಾಗಿದೆ.
ಮುಂಗಾರು ಶುರುವಾದ ನಂತರದಲ್ಲಿ ಮೊದಲ ಬಾರಿಗೆ ಜಲಾಶಯದ ಒಳಹರಿವು ಈ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ.
84 ಅಡಿ ಸಾಮರ್ಥ್ಯವಿರುವ ಜಲಾಶಯದ ಇಂದಿನ ನೀರಿನ ಮಟ್ಟ 66.27 ಅಡಿಗಳಾಗಿದೆ. ನಿನ್ನೆ ಒಂದೇ ದಿನ 1.5 ಅಡಿಗಳು ಹೆಚ್ಚಳವಾಗಿದ್ದು, ಜಲಾಶಯದಿಂದ 1000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.
ಮುಂಗಾರು ಮಳೆ ಹೀಗೇಯೇ ಮುಂದುವರಿದರೆ ಜಲಾಶಯ ಇನ್ನು 8 ದಿನಗಳ ಒಳಗಾಗಿ ಸಂಪೂರ್ಣ ಭರ್ತಿಯಾಗಲಿದೆ ಎನ್ನಲಾಗಿದ್ದು, ಯಾವುದೇ ಕ್ಷಣಗಳಲ್ಲಾದರೂ ಡ್ಯಾಂನಿಂದ ಕಪಿಲಾ ನದಿಗೆ ನೀರನ್ನು ಬಿಡುಗಡೆ ಮಾಡಲಾಗುತ್ತದೆ.
ಜಲಾಶಯದಿಂದ ಹೆಚ್ಚಿನ ನೀರನ್ನು ಬಿಡುಗಡೆ ಮಾಡುವುದರಿಂದ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳು ಜಲಾವೃತವಾಗಲಿವೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…