ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಇಂದಿನ ಒಳಹರಿವು 11,269 ಕ್ಯೂಸೆಕ್ಸ್ಗಳಿಗೆ ಏರಿಕೆಯಾಗಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಾದಂತೆ ಹೊರಹರಿವನ್ನು ಕೂಡ ಹೆಚ್ಚು ಮಾಡಲಾಗಿದ್ದು, ಇಂದಿನ ಹೊರಹರಿವನ್ನು 1542 ಕ್ಯೂಸೆಕ್ಸ್ಗಳಿಗೆ ಏರಿಕೆ ಮಾಡಲಾಗಿದೆ. 84 ಅಡಿ ಗರಿಷ್ಠ ನೀರಿನ ಮಟ್ಟ ಹೊಂದಿರುವ ಜಲಾಶಯದ ಈಗಿನ ನೀರಿನ ಮಟ್ಟ 70 ಅಡಿಗಳಿಗೆ ಏರಿಕೆಯಾಗಿದೆ.
ಮಳೆ ಹೀಗೆಯೇ ಮುಂದುವರಿದರೆ ಜಲಾಶಯ ಇನ್ನು ಕೆಲವೇ ದಿನಗಳಲ್ಲಿ ಭರ್ತಿಯಾಗಲಿದ್ದು, ಜಲಾಶಯದಿಂದ ಯಾವುದೇ ಕ್ಷಣದಲ್ಲಾದರೂ ಕಪಿನಾ ನದಿಗೆ ನೀರನ್ನು ಬಿಡಲಾಗುತ್ತದೆ. ಹೀಗಾಗಿ ಕಪಿಲಾ ನದಿ ಪಾತ್ರದಲ್ಲಿರುವ ಜನರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಕಬಿನಿ ಜಲಾಶಯ ಭರ್ತಿಯತ್ತ ಸಾಗುತ್ತಿರುವುದರಿಂದ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದ್ದು, ಈ ಬಾರಿಯೂ ನಾಲೆಗಳ ನೀರನ್ನು ನಂಬಿ ಉತ್ತಮ ಬೆಳೆ ಬೆಳೆಯಬಹುದು ಎಂದು ಅಂದಾಜಿಸಿದ್ದಾರೆ. ಕಬಿನಿ ಎಡದಂಡೆ ಹಾಗೂ ಬಲದಂಡೆ ನಾಲೆಗಳ ಮೂಲಕ ರೈತರು ಭತ್ತ ಬೆಳೆಯುವಲ್ಲಿ ಉತ್ಸುಕರಾಗಿದ್ದು, ಜಲಾಶಯ ಭರ್ತಿಯಾಗುವುದನ್ನೇ ಎದುರು ನೋಡುತ್ತಿದ್ದಾರೆ ಎನ್ನಲಾಗಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…