ಹುಣಸೂರು: ಕಳೆದ ಒಂದು ವಾರದಿಂದ ಬೀಳುತ್ತಿರುವ ಜಡಿ ಮಳೆಯಿಂದಾಗಿ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ.
ಹನಗೋಡು ಅಣೆಕಟ್ಟಿನ ಮೇಲೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಮನೋಹರ ದೃಶ್ಯ ನೋಡಲು ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ.
ಇನ್ನು ನೀರಿನ ಹರಿವಿನ ವೈಭವವನ್ನು ಜನರು ಕಣ್ತುಂಬಿಕೊಳ್ಳುತ್ತಿದ್ದು, ಅಣೆಕಟ್ಟಿನಿಂದ ಮುಖ್ಯ ಕಾಲುವೆಗೆ 400 ಕ್ಯೂಸೆಕ್ಸ್ ನೀರು ಬಿಡಲಾಗಿದೆ.
ಈಗ ಅಣೆಕಟ್ಟೆಯ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದ್ದು, ಮಳೆ ಹೀಗೆಯೇ ಮುಂದುವರಿದರೆ ನದಿಯಲ್ಲಿ ಪ್ರವಾಹ ಹೆಚ್ಚಾಗಲಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಇನ್ನೂ ಹುಣಸೂರು ತಾಲ್ಲೂಕಿನಲ್ಲೂ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಯ ಮೇಲೆಯೇ ಮಳೆಯ ನೀರು ನದಿಯಂತೆ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…