ಮೈಸೂರು

ಮೈಸೂರಲ್ಲಿ ಭರ್ಜರಿ ಮಳೆ : ವಾಹನ ಸವಾರರ ಪರದಾಟ

ಮೈಸೂರು : ಮೈಸೂರಲ್ಲಿ ಮಧ್ಯಾಹ್ನದ ವೇಳೆಗೆ ಮಳೆ ಶುರುವಾದ ಮಳೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಯಿತು.

ನಗರದೆಲ್ಲೆಡೆ ರಸ್ತೆ ಮೇಲೆ ಸಣ್ಣಸಣ್ಣ ಝರಿಗಳಂತೆ ಹರಿವ ನೀರು, ಹಲವೆಡೆ ರಸ್ತೆ ಮೇಲೆ ಚರಂಡಿ ನೀರು ಧಾರಾಕಾರವಾಗಿ ಹರಿದರೆ, ಅಲ್ಲಲ್ಲಿ ರಸ್ತೆಯ ಗುಂಡಿಗಳಲ್ಲಿ ತುಂಬಿದ್ದ ನೀರು ವಾಹನ ಚಾಲಕರು ಹಾಗೂ ಸವಾರರಿಗೆ ಸಮಸ್ಯೆಯಾಯಿತು.

ಗುರುವಾರ ಮಧ್ಯಾಹ್ನದಿಂದ ಸಂಜೆವರೆಗೆ ಸುರಿದ ಮಳೆಗೆ ತಗ್ಗು ಪ್ರದೇಶಗಳಲ್ಲಿ ನದಿಯೇ ರಭಸವಾಗಿ ಹರಿಯುತ್ತಿದ್ದಂತೆ ಭಾಸವಾಗಿತ್ತು. ನಗರದ ಒಂದು ಭಾಗಕ್ಕೆ ವರುಣ ಸಿಂಚನ ದೊರೆತರೆ ಮತ್ತೊಂದೆಡೆ ಸೂರ್ಯ ಪ್ರಕಾಶಿಸುತ್ತಿದ್ದ. ನಗರದ ಯಾದವಗಿರಿ, ಪಡುವಾರಹಳ್ಳಿ, ಬಂಬೂ ಬಜಾರ್, ಬನ್ನಿಮಂಟಪ, ಕೆ.ಆರ್ ಆಸ್ಪತ್ರೆ, ಅರಸು ರಸ್ತೆ, ದಾಸಪ್ಪ ವೃತ್ತ, ಮಾನಸ ಗಂಗೋತ್ರಿ ಆವರಣ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮದ್ಯಾಹ್ನ 2 ಕ್ಕೆ ಆರಂಭವಾದ ಮಳೆ ಸತತ ಒಂದೂವರೆ ಗಂಟೆಗೂ ಹೆಚ್ಚುಕಾಲ ಸುರಿಯಿತು. ಬಿಟ್ಟುಬಿಡದೇ ಸುರಿದ ಭಾರೀ ಮಳೆಗೆ ರಸ್ತೆ ಮೇಲೆ ನೀರು ತುಂಬಿ ಸಂಚಾರಕ್ಕೆ ಅಡಚಣೆ ಉಂಟಾಯಿತೆ ವಿನಃ ಯಾವುದೇ ಆಸ್ತಿಪಾಸ್ತಿಗೆ ನಷ್ಟವಾಗಿಲ್ಲ.

ಕೆರೆಯಂತಾದ ರಸ್ತೆ
ಭಾರೀ ಮಳೆಗೆ ಶೇಷಾದ್ರಿ ಅಯ್ಯರ್ ರಸ್ತೆ ಭಾಗಶಃ ಕೆರೆಯಂತಾಗಿತ್ತು. ರೈಲ್ವೆ ನಿಲ್ದಾಣ ಹಾಗೂ ಮೈಸೂರು ಮೆಡಿಕಲ್ ಕಾಲೇಜನ್ನು ಬೇರ್ಪಡಿಸುವ ಈ ರಸ್ತೆಯ ಮೇಲೆ ನೀರು ತುಂಬಿ ಬಂದಿತ್ತು. ಪಕ್ಕದಲ್ಲಿದ್ದ ಚರಂಡಿ ನೀರು ರಸ್ತೆ ಮಧ್ಯ ಭಾಗದಲ್ಲಿಯೇ ತುಂಬಿಕೊಂಡಿತು. ದ್ವಿಚಕ್ರ ವಾಹನಗಳು ಸಾಗದ ರೀತಿಯಲ್ಲಿ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿರುವ ದೃಶ್ಯ ಕಂಡುಬಂದಿತು.

ಟ್ರಾಫಿಕ್ ಜಾಮ್
ಯಾದವಗಿರಿಯಿಂದ ಬಂಬೂ ಜಜಾರ್‌ಗೆ ಸಂಪರ್ಕ ಕಲ್ಪಿಸುವ 3ನೇ ಮುಖ್ಯ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ರಸ್ತೆ ಮಧ್ಯೆಯಿರುವ ರೈಲ್ವೆ ಅಂಡರ್ ಬ್ರಿಡ್ಜ್‌ನಲ್ಲಿ ವಾಹನಗಳು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಭಾರೀ ಮಳೆಯಿಂದ ಆಶ್ರಯ ಪಡೆಯಲು ಬ್ರಿಡ್ಜ್ ಕೆಳಗೆ ಕೆಲವರು ನಿಂತರೆ, ರಸ್ತೆ ಮೇಲೆ ಭಾರೀ ಪ್ರಮಾಣದ ನೀರು ನಿಂತ ಕಾರಣ ವಾಹನಗಳು ನಿಂತಲ್ಲೆ ನಿಂತವು, ಇದರಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

44 mins ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

1 hour ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

3 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

3 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

4 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

4 hours ago