ಮೈಸೂರು

ಮೈಸೂರಲ್ಲಿ ಭರ್ಜರಿ ಮಳೆ : ವಾಹನ ಸವಾರರ ಪರದಾಟ

ಮೈಸೂರು : ಮೈಸೂರಲ್ಲಿ ಮಧ್ಯಾಹ್ನದ ವೇಳೆಗೆ ಮಳೆ ಶುರುವಾದ ಮಳೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಯಿತು.

ನಗರದೆಲ್ಲೆಡೆ ರಸ್ತೆ ಮೇಲೆ ಸಣ್ಣಸಣ್ಣ ಝರಿಗಳಂತೆ ಹರಿವ ನೀರು, ಹಲವೆಡೆ ರಸ್ತೆ ಮೇಲೆ ಚರಂಡಿ ನೀರು ಧಾರಾಕಾರವಾಗಿ ಹರಿದರೆ, ಅಲ್ಲಲ್ಲಿ ರಸ್ತೆಯ ಗುಂಡಿಗಳಲ್ಲಿ ತುಂಬಿದ್ದ ನೀರು ವಾಹನ ಚಾಲಕರು ಹಾಗೂ ಸವಾರರಿಗೆ ಸಮಸ್ಯೆಯಾಯಿತು.

ಗುರುವಾರ ಮಧ್ಯಾಹ್ನದಿಂದ ಸಂಜೆವರೆಗೆ ಸುರಿದ ಮಳೆಗೆ ತಗ್ಗು ಪ್ರದೇಶಗಳಲ್ಲಿ ನದಿಯೇ ರಭಸವಾಗಿ ಹರಿಯುತ್ತಿದ್ದಂತೆ ಭಾಸವಾಗಿತ್ತು. ನಗರದ ಒಂದು ಭಾಗಕ್ಕೆ ವರುಣ ಸಿಂಚನ ದೊರೆತರೆ ಮತ್ತೊಂದೆಡೆ ಸೂರ್ಯ ಪ್ರಕಾಶಿಸುತ್ತಿದ್ದ. ನಗರದ ಯಾದವಗಿರಿ, ಪಡುವಾರಹಳ್ಳಿ, ಬಂಬೂ ಬಜಾರ್, ಬನ್ನಿಮಂಟಪ, ಕೆ.ಆರ್ ಆಸ್ಪತ್ರೆ, ಅರಸು ರಸ್ತೆ, ದಾಸಪ್ಪ ವೃತ್ತ, ಮಾನಸ ಗಂಗೋತ್ರಿ ಆವರಣ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮದ್ಯಾಹ್ನ 2 ಕ್ಕೆ ಆರಂಭವಾದ ಮಳೆ ಸತತ ಒಂದೂವರೆ ಗಂಟೆಗೂ ಹೆಚ್ಚುಕಾಲ ಸುರಿಯಿತು. ಬಿಟ್ಟುಬಿಡದೇ ಸುರಿದ ಭಾರೀ ಮಳೆಗೆ ರಸ್ತೆ ಮೇಲೆ ನೀರು ತುಂಬಿ ಸಂಚಾರಕ್ಕೆ ಅಡಚಣೆ ಉಂಟಾಯಿತೆ ವಿನಃ ಯಾವುದೇ ಆಸ್ತಿಪಾಸ್ತಿಗೆ ನಷ್ಟವಾಗಿಲ್ಲ.

ಕೆರೆಯಂತಾದ ರಸ್ತೆ
ಭಾರೀ ಮಳೆಗೆ ಶೇಷಾದ್ರಿ ಅಯ್ಯರ್ ರಸ್ತೆ ಭಾಗಶಃ ಕೆರೆಯಂತಾಗಿತ್ತು. ರೈಲ್ವೆ ನಿಲ್ದಾಣ ಹಾಗೂ ಮೈಸೂರು ಮೆಡಿಕಲ್ ಕಾಲೇಜನ್ನು ಬೇರ್ಪಡಿಸುವ ಈ ರಸ್ತೆಯ ಮೇಲೆ ನೀರು ತುಂಬಿ ಬಂದಿತ್ತು. ಪಕ್ಕದಲ್ಲಿದ್ದ ಚರಂಡಿ ನೀರು ರಸ್ತೆ ಮಧ್ಯ ಭಾಗದಲ್ಲಿಯೇ ತುಂಬಿಕೊಂಡಿತು. ದ್ವಿಚಕ್ರ ವಾಹನಗಳು ಸಾಗದ ರೀತಿಯಲ್ಲಿ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿರುವ ದೃಶ್ಯ ಕಂಡುಬಂದಿತು.

ಟ್ರಾಫಿಕ್ ಜಾಮ್
ಯಾದವಗಿರಿಯಿಂದ ಬಂಬೂ ಜಜಾರ್‌ಗೆ ಸಂಪರ್ಕ ಕಲ್ಪಿಸುವ 3ನೇ ಮುಖ್ಯ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ರಸ್ತೆ ಮಧ್ಯೆಯಿರುವ ರೈಲ್ವೆ ಅಂಡರ್ ಬ್ರಿಡ್ಜ್‌ನಲ್ಲಿ ವಾಹನಗಳು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಭಾರೀ ಮಳೆಯಿಂದ ಆಶ್ರಯ ಪಡೆಯಲು ಬ್ರಿಡ್ಜ್ ಕೆಳಗೆ ಕೆಲವರು ನಿಂತರೆ, ರಸ್ತೆ ಮೇಲೆ ಭಾರೀ ಪ್ರಮಾಣದ ನೀರು ನಿಂತ ಕಾರಣ ವಾಹನಗಳು ನಿಂತಲ್ಲೆ ನಿಂತವು, ಇದರಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

10 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

10 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

10 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

12 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

13 hours ago