ಮೈಸೂರು

ಮೈಸೂರಲ್ಲಿ ಭರ್ಜರಿ ಮಳೆ : ವಾಹನ ಸವಾರರ ಪರದಾಟ

ಮೈಸೂರು : ಮೈಸೂರಲ್ಲಿ ಮಧ್ಯಾಹ್ನದ ವೇಳೆಗೆ ಮಳೆ ಶುರುವಾದ ಮಳೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಯಿತು.

ನಗರದೆಲ್ಲೆಡೆ ರಸ್ತೆ ಮೇಲೆ ಸಣ್ಣಸಣ್ಣ ಝರಿಗಳಂತೆ ಹರಿವ ನೀರು, ಹಲವೆಡೆ ರಸ್ತೆ ಮೇಲೆ ಚರಂಡಿ ನೀರು ಧಾರಾಕಾರವಾಗಿ ಹರಿದರೆ, ಅಲ್ಲಲ್ಲಿ ರಸ್ತೆಯ ಗುಂಡಿಗಳಲ್ಲಿ ತುಂಬಿದ್ದ ನೀರು ವಾಹನ ಚಾಲಕರು ಹಾಗೂ ಸವಾರರಿಗೆ ಸಮಸ್ಯೆಯಾಯಿತು.

ಗುರುವಾರ ಮಧ್ಯಾಹ್ನದಿಂದ ಸಂಜೆವರೆಗೆ ಸುರಿದ ಮಳೆಗೆ ತಗ್ಗು ಪ್ರದೇಶಗಳಲ್ಲಿ ನದಿಯೇ ರಭಸವಾಗಿ ಹರಿಯುತ್ತಿದ್ದಂತೆ ಭಾಸವಾಗಿತ್ತು. ನಗರದ ಒಂದು ಭಾಗಕ್ಕೆ ವರುಣ ಸಿಂಚನ ದೊರೆತರೆ ಮತ್ತೊಂದೆಡೆ ಸೂರ್ಯ ಪ್ರಕಾಶಿಸುತ್ತಿದ್ದ. ನಗರದ ಯಾದವಗಿರಿ, ಪಡುವಾರಹಳ್ಳಿ, ಬಂಬೂ ಬಜಾರ್, ಬನ್ನಿಮಂಟಪ, ಕೆ.ಆರ್ ಆಸ್ಪತ್ರೆ, ಅರಸು ರಸ್ತೆ, ದಾಸಪ್ಪ ವೃತ್ತ, ಮಾನಸ ಗಂಗೋತ್ರಿ ಆವರಣ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮದ್ಯಾಹ್ನ 2 ಕ್ಕೆ ಆರಂಭವಾದ ಮಳೆ ಸತತ ಒಂದೂವರೆ ಗಂಟೆಗೂ ಹೆಚ್ಚುಕಾಲ ಸುರಿಯಿತು. ಬಿಟ್ಟುಬಿಡದೇ ಸುರಿದ ಭಾರೀ ಮಳೆಗೆ ರಸ್ತೆ ಮೇಲೆ ನೀರು ತುಂಬಿ ಸಂಚಾರಕ್ಕೆ ಅಡಚಣೆ ಉಂಟಾಯಿತೆ ವಿನಃ ಯಾವುದೇ ಆಸ್ತಿಪಾಸ್ತಿಗೆ ನಷ್ಟವಾಗಿಲ್ಲ.

ಕೆರೆಯಂತಾದ ರಸ್ತೆ
ಭಾರೀ ಮಳೆಗೆ ಶೇಷಾದ್ರಿ ಅಯ್ಯರ್ ರಸ್ತೆ ಭಾಗಶಃ ಕೆರೆಯಂತಾಗಿತ್ತು. ರೈಲ್ವೆ ನಿಲ್ದಾಣ ಹಾಗೂ ಮೈಸೂರು ಮೆಡಿಕಲ್ ಕಾಲೇಜನ್ನು ಬೇರ್ಪಡಿಸುವ ಈ ರಸ್ತೆಯ ಮೇಲೆ ನೀರು ತುಂಬಿ ಬಂದಿತ್ತು. ಪಕ್ಕದಲ್ಲಿದ್ದ ಚರಂಡಿ ನೀರು ರಸ್ತೆ ಮಧ್ಯ ಭಾಗದಲ್ಲಿಯೇ ತುಂಬಿಕೊಂಡಿತು. ದ್ವಿಚಕ್ರ ವಾಹನಗಳು ಸಾಗದ ರೀತಿಯಲ್ಲಿ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿರುವ ದೃಶ್ಯ ಕಂಡುಬಂದಿತು.

ಟ್ರಾಫಿಕ್ ಜಾಮ್
ಯಾದವಗಿರಿಯಿಂದ ಬಂಬೂ ಜಜಾರ್‌ಗೆ ಸಂಪರ್ಕ ಕಲ್ಪಿಸುವ 3ನೇ ಮುಖ್ಯ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ರಸ್ತೆ ಮಧ್ಯೆಯಿರುವ ರೈಲ್ವೆ ಅಂಡರ್ ಬ್ರಿಡ್ಜ್‌ನಲ್ಲಿ ವಾಹನಗಳು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಭಾರೀ ಮಳೆಯಿಂದ ಆಶ್ರಯ ಪಡೆಯಲು ಬ್ರಿಡ್ಜ್ ಕೆಳಗೆ ಕೆಲವರು ನಿಂತರೆ, ರಸ್ತೆ ಮೇಲೆ ಭಾರೀ ಪ್ರಮಾಣದ ನೀರು ನಿಂತ ಕಾರಣ ವಾಹನಗಳು ನಿಂತಲ್ಲೆ ನಿಂತವು, ಇದರಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

3 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

7 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

7 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

10 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

10 hours ago