ಮೈಸೂರು

ಮೈಸೂರು: ವರುಣಾರ್ಭಟಕ್ಕೆ ನೆಲಕ್ಕುರುಳಿದ ಮರ: ತಪ್ಪಿದ ಭಾರೀ ಅನಾಹುತ

ಮೈಸೂರು: ಮೈಸೂರಿನಲ್ಲಿ ಮಳೆ ಆರ್ಭಟ ಮತ್ತೆ ಜೋರಾಗದ್ದು, ನಗರದ ಹಲವೆಡೆ ಅಪಾರ ಹಾನಿ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. ನಗರದ ರಾಮಕೃಷ್ಣ ನಗರದ ಕನಕ ಟ್ರಾವೆಲ್ಸ್ ಬಳಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಬೃಹತ್‌ ಗಾತ್ರದ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದಿದ್ದು ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ.

ಮರ ವಿದ್ಯುತ್ ತಂತಿ, ಕಂಬದ ಮೇಲೆ ಬಿದ್ದಾಗ ವಿದ್ಯುತ್ ಸಂಪರ್ಕ ಕಡಿತವಾಗಿ ಗುರುವಾರ ಮಧ್ಯಾಹ್ನ ವಾದರೂ ಮರವನ್ನು ತೆರವುಗೊಳಿಸದೆ, ವಿದ್ಯುತ್ ವ್ಯವಸ್ಥೆ ಸರಿಪಡಿಸದೇ ಇದ್ದುದರಿಂದ ವಿದ್ಯುತ್ ಪೂರೈಕೆಯಿಲ್ಲದೆ ಬಡಾವಣೆ ನಿವಾಸಿಗಳು ಪರದಾಡಿದರು.

ಜತೆಗೆ ಮರ ವಿದ್ಯುತ್ ಕಂಬದ ಮೇಲೆ ಬಿದ್ದಿದ್ದರಿಂದ ಕಂಬ ತುಂಡಾಗಿ ಮರದ ಕೆಳಗೆ ನಿಲ್ಲಿಸಿದ್ದ ಕಾರೊಂದರ ಮೇಲೆ ಉರುಳಿದೆ. ಆದರೆ ಕಾರಿಗೆ ಹೆಚ್ಚು ಹಾನಿಯಾಗಿಲ್ಲ.

ರಾತ್ರಿ ಮಳೆಯಾದ ಸಂದರ್ಭದಲ್ಲಿ ಅಂತಹ ಭಾರೀ ಗಾಳಿ ಇಲ್ಲದಿದ್ದರೂ ತೇವಾಂಶದಿಂದ ಬೇರು ಸಡಿಲಗೊಂಡಿದ್ದ ಮರ ಬಿದ್ದಿದೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದರು. ಅಲ್ಲದೆ ಮಳೆಯಾಗುತ್ತಿದ್ದರಿಂದ ಈ ಸ್ಥಳದಲ್ಲಿ ಜನರ ಓಡಾಟ ಇಲ್ಲದ್ದರಿಂದ ಅನಾಹುತ ತಪ್ಪಿದೆ.

andolana

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

6 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

6 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

7 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

9 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

9 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

10 hours ago