ಮೈಸೂರು: ಮೈಸೂರಿನಲ್ಲಿ ಮಳೆ ಆರ್ಭಟ ಮತ್ತೆ ಜೋರಾಗದ್ದು, ನಗರದ ಹಲವೆಡೆ ಅಪಾರ ಹಾನಿ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. ನಗರದ ರಾಮಕೃಷ್ಣ ನಗರದ ಕನಕ ಟ್ರಾವೆಲ್ಸ್ ಬಳಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಬೃಹತ್ ಗಾತ್ರದ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದಿದ್ದು ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ.
ಮರ ವಿದ್ಯುತ್ ತಂತಿ, ಕಂಬದ ಮೇಲೆ ಬಿದ್ದಾಗ ವಿದ್ಯುತ್ ಸಂಪರ್ಕ ಕಡಿತವಾಗಿ ಗುರುವಾರ ಮಧ್ಯಾಹ್ನ ವಾದರೂ ಮರವನ್ನು ತೆರವುಗೊಳಿಸದೆ, ವಿದ್ಯುತ್ ವ್ಯವಸ್ಥೆ ಸರಿಪಡಿಸದೇ ಇದ್ದುದರಿಂದ ವಿದ್ಯುತ್ ಪೂರೈಕೆಯಿಲ್ಲದೆ ಬಡಾವಣೆ ನಿವಾಸಿಗಳು ಪರದಾಡಿದರು.
ಜತೆಗೆ ಮರ ವಿದ್ಯುತ್ ಕಂಬದ ಮೇಲೆ ಬಿದ್ದಿದ್ದರಿಂದ ಕಂಬ ತುಂಡಾಗಿ ಮರದ ಕೆಳಗೆ ನಿಲ್ಲಿಸಿದ್ದ ಕಾರೊಂದರ ಮೇಲೆ ಉರುಳಿದೆ. ಆದರೆ ಕಾರಿಗೆ ಹೆಚ್ಚು ಹಾನಿಯಾಗಿಲ್ಲ.
ರಾತ್ರಿ ಮಳೆಯಾದ ಸಂದರ್ಭದಲ್ಲಿ ಅಂತಹ ಭಾರೀ ಗಾಳಿ ಇಲ್ಲದಿದ್ದರೂ ತೇವಾಂಶದಿಂದ ಬೇರು ಸಡಿಲಗೊಂಡಿದ್ದ ಮರ ಬಿದ್ದಿದೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದರು. ಅಲ್ಲದೆ ಮಳೆಯಾಗುತ್ತಿದ್ದರಿಂದ ಈ ಸ್ಥಳದಲ್ಲಿ ಜನರ ಓಡಾಟ ಇಲ್ಲದ್ದರಿಂದ ಅನಾಹುತ ತಪ್ಪಿದೆ.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…