ಮೈಸೂರು

ವಯನಾಡಿನಲ್ಲಿ ಭಾರೀ ಮಳೆ : ಕಬಿನಿ ಜಲಾಶಯದಿಂದ 25,000 ಕ್ಯೂಸೆಕ್ಸ್ ನೀರು ಬಿಡುಗಡೆ

ಎಚ್.ಡಿ.ಕೋಟೆ : ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ.

ಜಲಾಶಯದ ಇಂದಿನ ಒಳಹರಿವು 23,775 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 80 ಅಡಿಗಳಾಗಿದೆ.

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಕಬಿನಿ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ಕಪಿಲಾ ನದಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಹೀಗೆ ಮಳೆ ಮುಂದುವರೆದರೆ ಇನ್ನೂ ಮೂರು ನಾಲ್ಕು ದಿನಗಳಲ್ಲಿ ಕಬಿನಿ ಜಲಾಶಯ ತುಂಬಲಿದೆ.

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

7 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

8 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

10 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

11 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

14 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

14 hours ago