ಮೈಸೂರು

ಮೈಸೂರು: ಗಂಗೋತ್ರಿ ಕಾಮರ್ಸ್‌ ಕಟ್ಟಡದ ಮುಂದೆ ಧರೆಗುರುಳಿದ ಭಾರೀ ಮರದ ಕೊಂಬೆ

ಮೈಸೂರು: ನಗರದ ಗಂಗೋತ್ರಿ ಲೇಔಟ್‌ನಲ್ಲಿರುವ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ತಡ ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆಯೊಂದು ಮುರಿದು ಬಿದ್ದಿರುವುದು ಕಂಡುಬಂದಿದೆ.

ಗಂಗೋತ್ರಿ ಕ್ಯಾಂಪಸ್‌ನ ವಾಣಿಜ್ಯ ವಿಭಾಗದ ಮುಂಭಾಗದ ರಸ್ತೆ ಬದಿಯಲ್ಲಿರುವ ಬೃಹತ್‌ ಆಲದ ಮರದ ಕೊಂಬೆಯೊಂದು ಮುರಿದು ನಡು ರಸ್ತೆಯ ಮೇಲೆ ಬಿದ್ದಿದೆ. ಬೃಹದಾಕಾರದ ಕೊಂಬೆ ಇಡೀ ರಸ್ತೆಯನ್ನೇ ಆವರಿಸಿದೆ.

ಬೆಳಿಗ್ಗೆ 9.30 ಗಂಟೆಯಾದರು ಅದು ರಸ್ತೆಯಲ್ಲಿಯೇ ಬಿದ್ದಿದ್ದು, ಆ ರಸ್ತೆ ಮೂಲಕ ವಾಣಿಜ್ಯ ವಿಭಾಗ, ಗಣಿತ ಶಾಸ್ತ್ರ ವಿಭಾಗ, ಮಾನವಿಕ ಸಭಾಂಗಣ, ಗ್ರಂಥಾಲಯ ಸೇರಿದಂತೆ ವಿವಿಧ ಕಡೆಗಳಿಗೆ ಬದಲಿ ರಸ್ತೆ ಬಳಸಿ ವಿದ್ಯಾರ್ಥಿಗಳು ತೆರಳುತ್ತಿದ್ದಾರೆ.

ಮರದ ಕೊಂಬೆ ಬಿದ್ದಿದೆ. ಆದರೆ ಯಾವುದೇ ಹಾನಿ ಸಂಭವಿಸಿಲ್ಲ. ಕಾಲೇಜಿಗೆ ವಿದ್ಯಾರ್ಥಿಗಳು ಬಳಸುವ ರಸ್ತೆ ಮೇಲೆ ಮರದ ಕೊಂಬೆ ಬಿದ್ದಿದ್ದು, ಅದನ್ನು ಇನ್ನು ತೆರವುಗೊಳಿಸದೇ ಇರುವುದು ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ಹಿಡಿದ ಕೈ ಗನ್ನಡಿಯಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೋಟ್‌:

ಕ್ಯಾಂಪಸ್‌ನಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲ. ಮಳೆ ಬಂದರೆ ರಸ್ತೆಯಲ್ಲಿಯೇ ನೀರು ನಿಲ್ಲುತ್ತಿದೆ. ಸಮರ್ಪಕ ಡ್ರೈನೇಜ್‌ ವ್ಯವಸ್ಥೆಯಿಲ್ಲ. ಮಳೆ ಬಂದರೇ ಮರದ ಕೊಂಬೆಗಳು ಅಲ್ಲಲ್ಲಿ ಮರದ ಕೊಂಬೆಗಳು ಮುರಿದು ಬೀಳುವ ಸ್ಥಿತಿಯಲ್ಲಿದ್ದು, ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆ ಮುರಿದು ಬಿದ್ದಿದೆ. ಇದರಿಂದ ಯಾರಿಗಾದರೂ ಹಾನಿಯಾಗಿದ್ದರೇ ಯಾರು ಹೊಣೆ. ಈ ಬಗ್ಗೆ ವಿವಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

-ಮನೋಜ್‌.ಎನ್‌, ಅಭಿವೃದ್ಧಿ ಅಧ್ಯಯನ ಸಂಸ್ಥೆ, ಮಾನಸ ಗಂಗೋತ್ರಿ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

6 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

6 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

7 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

8 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

8 hours ago