ಮೈಸೂರು: ನಗರದ ಗಂಗೋತ್ರಿ ಲೇಔಟ್ನಲ್ಲಿರುವ ಮಾನಸ ಗಂಗೋತ್ರಿ ಕ್ಯಾಂಪಸ್ನಲ್ಲಿ ತಡ ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆಯೊಂದು ಮುರಿದು ಬಿದ್ದಿರುವುದು ಕಂಡುಬಂದಿದೆ.
ಗಂಗೋತ್ರಿ ಕ್ಯಾಂಪಸ್ನ ವಾಣಿಜ್ಯ ವಿಭಾಗದ ಮುಂಭಾಗದ ರಸ್ತೆ ಬದಿಯಲ್ಲಿರುವ ಬೃಹತ್ ಆಲದ ಮರದ ಕೊಂಬೆಯೊಂದು ಮುರಿದು ನಡು ರಸ್ತೆಯ ಮೇಲೆ ಬಿದ್ದಿದೆ. ಬೃಹದಾಕಾರದ ಕೊಂಬೆ ಇಡೀ ರಸ್ತೆಯನ್ನೇ ಆವರಿಸಿದೆ.
ಬೆಳಿಗ್ಗೆ 9.30 ಗಂಟೆಯಾದರು ಅದು ರಸ್ತೆಯಲ್ಲಿಯೇ ಬಿದ್ದಿದ್ದು, ಆ ರಸ್ತೆ ಮೂಲಕ ವಾಣಿಜ್ಯ ವಿಭಾಗ, ಗಣಿತ ಶಾಸ್ತ್ರ ವಿಭಾಗ, ಮಾನವಿಕ ಸಭಾಂಗಣ, ಗ್ರಂಥಾಲಯ ಸೇರಿದಂತೆ ವಿವಿಧ ಕಡೆಗಳಿಗೆ ಬದಲಿ ರಸ್ತೆ ಬಳಸಿ ವಿದ್ಯಾರ್ಥಿಗಳು ತೆರಳುತ್ತಿದ್ದಾರೆ.
ಮರದ ಕೊಂಬೆ ಬಿದ್ದಿದೆ. ಆದರೆ ಯಾವುದೇ ಹಾನಿ ಸಂಭವಿಸಿಲ್ಲ. ಕಾಲೇಜಿಗೆ ವಿದ್ಯಾರ್ಥಿಗಳು ಬಳಸುವ ರಸ್ತೆ ಮೇಲೆ ಮರದ ಕೊಂಬೆ ಬಿದ್ದಿದ್ದು, ಅದನ್ನು ಇನ್ನು ತೆರವುಗೊಳಿಸದೇ ಇರುವುದು ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ಹಿಡಿದ ಕೈ ಗನ್ನಡಿಯಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೋಟ್:
ಕ್ಯಾಂಪಸ್ನಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲ. ಮಳೆ ಬಂದರೆ ರಸ್ತೆಯಲ್ಲಿಯೇ ನೀರು ನಿಲ್ಲುತ್ತಿದೆ. ಸಮರ್ಪಕ ಡ್ರೈನೇಜ್ ವ್ಯವಸ್ಥೆಯಿಲ್ಲ. ಮಳೆ ಬಂದರೇ ಮರದ ಕೊಂಬೆಗಳು ಅಲ್ಲಲ್ಲಿ ಮರದ ಕೊಂಬೆಗಳು ಮುರಿದು ಬೀಳುವ ಸ್ಥಿತಿಯಲ್ಲಿದ್ದು, ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆ ಮುರಿದು ಬಿದ್ದಿದೆ. ಇದರಿಂದ ಯಾರಿಗಾದರೂ ಹಾನಿಯಾಗಿದ್ದರೇ ಯಾರು ಹೊಣೆ. ಈ ಬಗ್ಗೆ ವಿವಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
-ಮನೋಜ್.ಎನ್, ಅಭಿವೃದ್ಧಿ ಅಧ್ಯಯನ ಸಂಸ್ಥೆ, ಮಾನಸ ಗಂಗೋತ್ರಿ.
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ …
ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …
ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ ಪೈಪ್ಗಳನ್ನು ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಪೈಪ್ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…