ಮೈಸೂರು

ಮೈಸೂರು: ಗಂಗೋತ್ರಿ ಕಾಮರ್ಸ್‌ ಕಟ್ಟಡದ ಮುಂದೆ ಧರೆಗುರುಳಿದ ಭಾರೀ ಮರದ ಕೊಂಬೆ

ಮೈಸೂರು: ನಗರದ ಗಂಗೋತ್ರಿ ಲೇಔಟ್‌ನಲ್ಲಿರುವ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ತಡ ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆಯೊಂದು ಮುರಿದು ಬಿದ್ದಿರುವುದು ಕಂಡುಬಂದಿದೆ.

ಗಂಗೋತ್ರಿ ಕ್ಯಾಂಪಸ್‌ನ ವಾಣಿಜ್ಯ ವಿಭಾಗದ ಮುಂಭಾಗದ ರಸ್ತೆ ಬದಿಯಲ್ಲಿರುವ ಬೃಹತ್‌ ಆಲದ ಮರದ ಕೊಂಬೆಯೊಂದು ಮುರಿದು ನಡು ರಸ್ತೆಯ ಮೇಲೆ ಬಿದ್ದಿದೆ. ಬೃಹದಾಕಾರದ ಕೊಂಬೆ ಇಡೀ ರಸ್ತೆಯನ್ನೇ ಆವರಿಸಿದೆ.

ಬೆಳಿಗ್ಗೆ 9.30 ಗಂಟೆಯಾದರು ಅದು ರಸ್ತೆಯಲ್ಲಿಯೇ ಬಿದ್ದಿದ್ದು, ಆ ರಸ್ತೆ ಮೂಲಕ ವಾಣಿಜ್ಯ ವಿಭಾಗ, ಗಣಿತ ಶಾಸ್ತ್ರ ವಿಭಾಗ, ಮಾನವಿಕ ಸಭಾಂಗಣ, ಗ್ರಂಥಾಲಯ ಸೇರಿದಂತೆ ವಿವಿಧ ಕಡೆಗಳಿಗೆ ಬದಲಿ ರಸ್ತೆ ಬಳಸಿ ವಿದ್ಯಾರ್ಥಿಗಳು ತೆರಳುತ್ತಿದ್ದಾರೆ.

ಮರದ ಕೊಂಬೆ ಬಿದ್ದಿದೆ. ಆದರೆ ಯಾವುದೇ ಹಾನಿ ಸಂಭವಿಸಿಲ್ಲ. ಕಾಲೇಜಿಗೆ ವಿದ್ಯಾರ್ಥಿಗಳು ಬಳಸುವ ರಸ್ತೆ ಮೇಲೆ ಮರದ ಕೊಂಬೆ ಬಿದ್ದಿದ್ದು, ಅದನ್ನು ಇನ್ನು ತೆರವುಗೊಳಿಸದೇ ಇರುವುದು ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ಹಿಡಿದ ಕೈ ಗನ್ನಡಿಯಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೋಟ್‌:

ಕ್ಯಾಂಪಸ್‌ನಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲ. ಮಳೆ ಬಂದರೆ ರಸ್ತೆಯಲ್ಲಿಯೇ ನೀರು ನಿಲ್ಲುತ್ತಿದೆ. ಸಮರ್ಪಕ ಡ್ರೈನೇಜ್‌ ವ್ಯವಸ್ಥೆಯಿಲ್ಲ. ಮಳೆ ಬಂದರೇ ಮರದ ಕೊಂಬೆಗಳು ಅಲ್ಲಲ್ಲಿ ಮರದ ಕೊಂಬೆಗಳು ಮುರಿದು ಬೀಳುವ ಸ್ಥಿತಿಯಲ್ಲಿದ್ದು, ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆ ಮುರಿದು ಬಿದ್ದಿದೆ. ಇದರಿಂದ ಯಾರಿಗಾದರೂ ಹಾನಿಯಾಗಿದ್ದರೇ ಯಾರು ಹೊಣೆ. ಈ ಬಗ್ಗೆ ವಿವಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

-ಮನೋಜ್‌.ಎನ್‌, ಅಭಿವೃದ್ಧಿ ಅಧ್ಯಯನ ಸಂಸ್ಥೆ, ಮಾನಸ ಗಂಗೋತ್ರಿ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…

8 mins ago

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…

48 mins ago

ಓದುಗರ ಪತ್ರ: ಜಲಪುರಿ ಬಡಾವಣೆ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಜಲಪುರಿ ಬಡಾವಣೆಯ  ಪೊಲೀಸ್ ಆಸ್ಪತ್ರೆ ಮುಂಭಾಗದ  ರಸ್ತೆ ತೀರಾ ಹದಗೆಟ್ಟಿದೆ.  ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…

2 hours ago

ಓದುಗರ ಪತ್ರ: ಐಪಿಎಲ್‌ನಲ್ಲಿ ಭಾರತೀಯ ಆಟಗಾರರೇ ಆಡಲಿ

೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’  (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ.  ಐಪಿಎಲ್ ತಂಡಗಳಲ್ಲಿ …

2 hours ago

ಓದುಗರ ಪತ್ರ: ಮೆಟ್ರೋ ಪ್ರಯಾಣ ದರ ಏರಿಕೆ ಸಲ್ಲದು

ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …

2 hours ago

ಓದುಗರ ಪತ್ರ: ರಾಮಕೃಷ್ಣನಗರದ ಮುಖ್ಯ ರಸ್ತೆಗೆ ಡಾಂಬರ್ ಹಾಕಿ

ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ  ಪೈಪ್‌ಗಳನ್ನು  ಅಳವಡಿಸಲು ರಸ್ತೆಯನ್ನು  ಅಗೆಯಲಾಗಿತ್ತು. ಪೈಪ್‌ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…

2 hours ago