ಮೈಸೂರು

ಮೈಸೂರು: ಗಂಗೋತ್ರಿ ಕಾಮರ್ಸ್‌ ಕಟ್ಟಡದ ಮುಂದೆ ಧರೆಗುರುಳಿದ ಭಾರೀ ಮರದ ಕೊಂಬೆ

ಮೈಸೂರು: ನಗರದ ಗಂಗೋತ್ರಿ ಲೇಔಟ್‌ನಲ್ಲಿರುವ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ತಡ ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆಯೊಂದು ಮುರಿದು ಬಿದ್ದಿರುವುದು ಕಂಡುಬಂದಿದೆ.

ಗಂಗೋತ್ರಿ ಕ್ಯಾಂಪಸ್‌ನ ವಾಣಿಜ್ಯ ವಿಭಾಗದ ಮುಂಭಾಗದ ರಸ್ತೆ ಬದಿಯಲ್ಲಿರುವ ಬೃಹತ್‌ ಆಲದ ಮರದ ಕೊಂಬೆಯೊಂದು ಮುರಿದು ನಡು ರಸ್ತೆಯ ಮೇಲೆ ಬಿದ್ದಿದೆ. ಬೃಹದಾಕಾರದ ಕೊಂಬೆ ಇಡೀ ರಸ್ತೆಯನ್ನೇ ಆವರಿಸಿದೆ.

ಬೆಳಿಗ್ಗೆ 9.30 ಗಂಟೆಯಾದರು ಅದು ರಸ್ತೆಯಲ್ಲಿಯೇ ಬಿದ್ದಿದ್ದು, ಆ ರಸ್ತೆ ಮೂಲಕ ವಾಣಿಜ್ಯ ವಿಭಾಗ, ಗಣಿತ ಶಾಸ್ತ್ರ ವಿಭಾಗ, ಮಾನವಿಕ ಸಭಾಂಗಣ, ಗ್ರಂಥಾಲಯ ಸೇರಿದಂತೆ ವಿವಿಧ ಕಡೆಗಳಿಗೆ ಬದಲಿ ರಸ್ತೆ ಬಳಸಿ ವಿದ್ಯಾರ್ಥಿಗಳು ತೆರಳುತ್ತಿದ್ದಾರೆ.

ಮರದ ಕೊಂಬೆ ಬಿದ್ದಿದೆ. ಆದರೆ ಯಾವುದೇ ಹಾನಿ ಸಂಭವಿಸಿಲ್ಲ. ಕಾಲೇಜಿಗೆ ವಿದ್ಯಾರ್ಥಿಗಳು ಬಳಸುವ ರಸ್ತೆ ಮೇಲೆ ಮರದ ಕೊಂಬೆ ಬಿದ್ದಿದ್ದು, ಅದನ್ನು ಇನ್ನು ತೆರವುಗೊಳಿಸದೇ ಇರುವುದು ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ಹಿಡಿದ ಕೈ ಗನ್ನಡಿಯಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೋಟ್‌:

ಕ್ಯಾಂಪಸ್‌ನಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲ. ಮಳೆ ಬಂದರೆ ರಸ್ತೆಯಲ್ಲಿಯೇ ನೀರು ನಿಲ್ಲುತ್ತಿದೆ. ಸಮರ್ಪಕ ಡ್ರೈನೇಜ್‌ ವ್ಯವಸ್ಥೆಯಿಲ್ಲ. ಮಳೆ ಬಂದರೇ ಮರದ ಕೊಂಬೆಗಳು ಅಲ್ಲಲ್ಲಿ ಮರದ ಕೊಂಬೆಗಳು ಮುರಿದು ಬೀಳುವ ಸ್ಥಿತಿಯಲ್ಲಿದ್ದು, ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆ ಮುರಿದು ಬಿದ್ದಿದೆ. ಇದರಿಂದ ಯಾರಿಗಾದರೂ ಹಾನಿಯಾಗಿದ್ದರೇ ಯಾರು ಹೊಣೆ. ಈ ಬಗ್ಗೆ ವಿವಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

-ಮನೋಜ್‌.ಎನ್‌, ಅಭಿವೃದ್ಧಿ ಅಧ್ಯಯನ ಸಂಸ್ಥೆ, ಮಾನಸ ಗಂಗೋತ್ರಿ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

9 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

10 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

21 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

21 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

21 hours ago