ಮೈಸೂರು

ಪ್ಲಾಸ್ಟಿಕ್ ತ್ಯಾಜ್ಯದಿಂದ  ಹೆಬ್ಬಾಳು ಕೆರೆ ಮಲೀನ

ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಹೆಬ್ಬಾಳು ಕೆರೆ ಮಲೀನವಾಗುತ್ತಿದೆ. ರಾಜಕಾಲುವೆಗಳಿಂದ ಬಂದಂತಹ ಪ್ಲಾಸ್ಟಿಕ್ ತ್ಯಾಜ್ಯ ಕೆರೆಯಲ್ಲಿ ಸಂಗ್ರಹವಾಗುತ್ತಿದ್ದುಈ ವಿಷಯವಾಗಿ ದೂರುನೀಡಿದರೆ  ನಗರ ಸಭೆ  ಹಾಗೂ ಮೈಸೂರು ಮಹಾ ನಗರ ಪಾಲಿಕೆಯ ಅಧಿಕಾರಿಗಳು ನಮ್ಮ ವ್ಯಾಪ್ತಿಗೆ ಬರುವುದಿಲ್ಲವೆಂದು ಜಾರಿಕೊಳ್ಳುತ್ತಿದ್ದಾರೆ.

ಈ ಹೆಬ್ಬಾಳು ಕೆರೆ ಉಳಿಸಿ ಹೋರಾಟ ಸಮಿತಿ ಕೆರೆಯನ್ನು ಉಳಿಸುವಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡರ ನೇತೃತ್ವದಲ್ಲಿ ಯಶಸ್ಸು ಕಂಡಿತು ನಂತರ ಇದರ ಅಭಿವೃದ್ಧಿಗೆ ಕೈ ಹಾಕಿದವರು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರು ಸರಿ ಸುಮಾರು ಮೂವತ್ತು ಕೋಟಿ ರೂಗಳಲ್ಲಿ ಕೆರೆಯ ಅಭಿವೃದ್ಧಿ ಕಾರ್ಯವೂ ಸಾಂಗವಾಗಿ ಸಾಗಿತು ಆದರೂ ಇದರ ನಿರ್ವಹಣೆಯನ್ನು ಇನ್ಫೋಸಿಸ್ ಸಂಸ್ಥೆ ಮಾಡುತ್ತಿದೆ. ಉದ್ಯಾನವನ ನಿರ್ವಹಣೆ ಆಗುತ್ತಿದೆ ಆದರೆ ಕೆರೆಯ ತ್ಯಾಜ್ಯವನ್ನು ತೆರವುಗೊಳಿಸಲು ಅಸಮರ್ಥವಾಗಿರುವ ಅಧಿಕಾರಿವರ್ಗ ಮತ್ತು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ.

andolana

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

17 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

23 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

27 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago