ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ.
ಗುರುವಾರ ಸಂಜೆ ಅರಮನೆಯ ಮುಂಭಾಗದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟ ನಡೆದಿತ್ತು. ಬಲೂನುಗಳನ್ನ ಮಾರುತ್ತಿದ್ದ ವ್ಯಕ್ತಿಯ ಸಿಲಿಂಡರ್ ಸ್ಫೋಟಗೊಂಡು ಆ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಕೆಲವು ಗಾಯಗೊಂಡಿದ್ದಾರೆ.
ಇದನ್ನು ಓದಿ: ಸಿಲಿಂಡರ್ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ
ಈ ಕುರಿತಾಗಿ ಶುಕ್ರವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ಬಲೂನುಗಳನ್ನ ಮಾರುತ್ತಿದ್ದ ವ್ಯಕ್ತಿ ಹೀಲಿಯಂ ಸಿಲಿಂಡರ್ ಇಟ್ಕೊಂಡಿದ್ದ ಎಂಬ ಮಾಹಿತಿ ಇದೆ. ಆ ವ್ಯಕ್ತಿ ಉತ್ತರ ಪ್ರದೇಶ ಮೂಲದವನು ಎಂಬುವುದು ಗೊತ್ತಾಗಿದೆ. ಈ ಘಟನೆ ಯಾವ ರೀತಿ ನಡೆದಿದೆ ಎಂಬುವುದ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.
ವರದಿ ನೀಡಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಮೈಸೂರಿನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಅಲ್ಲಿ ಸುರಕ್ಷತೆಗೆ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸೂಚನೆ ನೀಡಲಾಗಿದೆ. ಈ ಹಿಂದೆ ಕಾಶ್ಮೀರದಲ್ಲಾಟ ಘಟನೆ ಬಗ್ಗೆ ಮಾಹಿತೆ ಇದೆ. ಈಗಾಗಿ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಇಂತಹ ಅಪಾಯಕಾರಿ ಸಿಲಿಂಡರ್ ಜನನಿಬಿಡ ಪ್ರದೇಶಗಳಲ್ಲಿ ಬಳಕೆ ಮಾಡುವುದು ಸರಿಯೇ ಎಂಬ ಪ್ರಶ್ನೆಗೆ, ಅವನಿಗೆ ಸಿಲಿಂಡರ್ ಹೇಗೆ ಸಿಗ್ತು? ಹೀಲಿಯಂ ಹೇಗೆ ಸಿಕ್ಕಿದೆ ಎಂಬ ಬಗ್ಗೆ ವರದಿ ಕೇಳಿದ್ದೇನೆ. ಮೈಸೂರು ನಗರ ಪೊಲೀಸ್ ಆಯುಕ್ತರು ಹಾಗೂ ಐಜಿಗೂ ಸೂಚನೆ ನೀಡದ್ದೇನೆ. ಅವರು ಏನು ವರದಿ ನೀಡುತ್ತಾರೆ ನೋಡೋಣ ಎಂದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…