ಮೈಸೂರು

ನರೇಂದ್ರ ಮೋದಿ ಪ್ರಮಾಣವಚನಕ್ಕೆ ಯಾರೆಲ್ಲಾ ಬರ್ತಾರೆ, ಇಲ್ಲಿದೆ ನೋಡಿ ಲಿಸ್ಟ್‌

ನವದೆಹಲಿ: ಜೂನ್ 9 ರಂದು ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಹುತೇಕ ಖಚಿತವಾಗಿದೆ.

ಜೂನ್‌ 9 ರ ರಾತ್ರಿ 6 ಗಂಟೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡಲಿದ್ದು, ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪದಗ್ರಹಣಕ್ಕೂ ಮುನ್ನ ಎನ್ ಡಿಎ ಮೈತ್ರಿಕೂಟದ ಸದಸ್ಯರ ಸಭೆ ನಡೆಯಲಿದೆ.

ಈ ಹಿನ್ನೆಲೆ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಈಗಾಗಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುದಾಗಿ ದೃಢಪಡಿಸಿದ್ದಾರೆ.

ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್, ಭೂತಾನ್ ಪ್ರಧಾನಿ ಕೌಂಟರ್ ಟ್ಶೆರಿಂಗ್ ಟೋಬ್ಗೇ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೂ ಆಹ್ವಾನ ನೀಡಲಾಗಿದೆ. ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ವರದಿಯಾಗಿದೆ.

2014 ಮತ್ತು 2019 ರಲ್ಲಿ ಯಾರೆಲ್ಲಾ ಬಂದಿದ್ರು?

2019ರಲ್ಲಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ BIMSTEC ಪ್ರಧಾನಿಗಳನ್ನು ಆಹ್ವಾನಿಸಿತ್ತು.
ಬಾಂಗ್ಲಾದೇಶ, ಭೂತಾನ್, ಭಾರತ, ಮಯನ್ಮಾರ್, ನೇಪಾಳ, ಶ್ರೀಲಾಂಕ ಮತ್ತು ಥೈಲ್ಯಾಂಡ್ ದೇಶಗಳು BIMSTEC ಸದಸ್ಯ ರಾಷ್ಟ್ರಗಳಾಗಿವೆ. ಈ ಎಲ್ಲಾ ನಾಯಕರು ಸೇರಿದಂತೆ 8 ಸಾವಿರ ಅತಿಥಿಗಳನ್ನು ಆಹ್ವಾನಿಸಲಾಗಿತ್ತು.

2014ರಲ್ಲಿ ಮೊದಲ ಬಾರಿಗೆ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಲಾಗಿತ್ತು. ಅಂದಿನ ಪಾಕಿಸ್ತಾನದ ಪ್ರಧಾನ ಮಂತ್ರಿ ನವಾಜ್ ಷರೀಫ್ ಸಹ ಪದಗ್ರಹಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇಂದು ಅನೇಕ ಗಣ್ಯರಿಗೆ ಆಹ್ವಾನ ನೀಡುವ ಸಾಧ್ಯತೆ
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರನ್ನು ಸಹ ಪದಗ್ರಹಣ ಕಾರ್ಯಕ್ರಮ ಆಹ್ವಾನಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನುಳಿದಂತೆ ವಿದೇಶಿ ಗಣ್ಯರಿಗೆ ಆಹ್ವಾನ ಕಳುಹಿಸುವ ಸಾಧ್ಯತೆ ಇದೆ. 2019 ರಲ್ಲಿ ನರೇಂದ್ರ ಮೋದಿಯವರೊಂದಿಗೆ 24 ಕೇಂದ್ರ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಬಾರಿ ಮೋದಿ 3.0 ಕ್ಯಾಬಿನೆಟ್‌ನಲ್ಲಿ ಮಿತ್ರ ಪಕ್ಷಗಳು ಪ್ರಾಬಲ್ಯ ಹೊಂದುವ ಸಾಧ್ಯತೆಗಳಿವೆ. ಈ ಬಾರಿ ಬಿಜೆಪಿಗೆ ಮ್ಯಾಜಿಕ್ ನಂಬರ್ ಸಿಗದ ಕಾರಣ, ಮಿತ್ರಪಕ್ಷಗಳ ವಿಶ್ವಾಸವನ್ನು ಕಾಯ್ದುಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

3 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

3 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

3 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

3 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

3 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

4 hours ago