ಮೈಸೂರು

ನರೇಂದ್ರ ಮೋದಿ ಪ್ರಮಾಣವಚನಕ್ಕೆ ಯಾರೆಲ್ಲಾ ಬರ್ತಾರೆ, ಇಲ್ಲಿದೆ ನೋಡಿ ಲಿಸ್ಟ್‌

ನವದೆಹಲಿ: ಜೂನ್ 9 ರಂದು ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಹುತೇಕ ಖಚಿತವಾಗಿದೆ.

ಜೂನ್‌ 9 ರ ರಾತ್ರಿ 6 ಗಂಟೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡಲಿದ್ದು, ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪದಗ್ರಹಣಕ್ಕೂ ಮುನ್ನ ಎನ್ ಡಿಎ ಮೈತ್ರಿಕೂಟದ ಸದಸ್ಯರ ಸಭೆ ನಡೆಯಲಿದೆ.

ಈ ಹಿನ್ನೆಲೆ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಈಗಾಗಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುದಾಗಿ ದೃಢಪಡಿಸಿದ್ದಾರೆ.

ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್, ಭೂತಾನ್ ಪ್ರಧಾನಿ ಕೌಂಟರ್ ಟ್ಶೆರಿಂಗ್ ಟೋಬ್ಗೇ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೂ ಆಹ್ವಾನ ನೀಡಲಾಗಿದೆ. ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ವರದಿಯಾಗಿದೆ.

2014 ಮತ್ತು 2019 ರಲ್ಲಿ ಯಾರೆಲ್ಲಾ ಬಂದಿದ್ರು?

2019ರಲ್ಲಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ BIMSTEC ಪ್ರಧಾನಿಗಳನ್ನು ಆಹ್ವಾನಿಸಿತ್ತು.
ಬಾಂಗ್ಲಾದೇಶ, ಭೂತಾನ್, ಭಾರತ, ಮಯನ್ಮಾರ್, ನೇಪಾಳ, ಶ್ರೀಲಾಂಕ ಮತ್ತು ಥೈಲ್ಯಾಂಡ್ ದೇಶಗಳು BIMSTEC ಸದಸ್ಯ ರಾಷ್ಟ್ರಗಳಾಗಿವೆ. ಈ ಎಲ್ಲಾ ನಾಯಕರು ಸೇರಿದಂತೆ 8 ಸಾವಿರ ಅತಿಥಿಗಳನ್ನು ಆಹ್ವಾನಿಸಲಾಗಿತ್ತು.

2014ರಲ್ಲಿ ಮೊದಲ ಬಾರಿಗೆ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಲಾಗಿತ್ತು. ಅಂದಿನ ಪಾಕಿಸ್ತಾನದ ಪ್ರಧಾನ ಮಂತ್ರಿ ನವಾಜ್ ಷರೀಫ್ ಸಹ ಪದಗ್ರಹಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇಂದು ಅನೇಕ ಗಣ್ಯರಿಗೆ ಆಹ್ವಾನ ನೀಡುವ ಸಾಧ್ಯತೆ
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರನ್ನು ಸಹ ಪದಗ್ರಹಣ ಕಾರ್ಯಕ್ರಮ ಆಹ್ವಾನಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನುಳಿದಂತೆ ವಿದೇಶಿ ಗಣ್ಯರಿಗೆ ಆಹ್ವಾನ ಕಳುಹಿಸುವ ಸಾಧ್ಯತೆ ಇದೆ. 2019 ರಲ್ಲಿ ನರೇಂದ್ರ ಮೋದಿಯವರೊಂದಿಗೆ 24 ಕೇಂದ್ರ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಬಾರಿ ಮೋದಿ 3.0 ಕ್ಯಾಬಿನೆಟ್‌ನಲ್ಲಿ ಮಿತ್ರ ಪಕ್ಷಗಳು ಪ್ರಾಬಲ್ಯ ಹೊಂದುವ ಸಾಧ್ಯತೆಗಳಿವೆ. ಈ ಬಾರಿ ಬಿಜೆಪಿಗೆ ಮ್ಯಾಜಿಕ್ ನಂಬರ್ ಸಿಗದ ಕಾರಣ, ಮಿತ್ರಪಕ್ಷಗಳ ವಿಶ್ವಾಸವನ್ನು ಕಾಯ್ದುಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

7 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

11 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

11 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

12 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

12 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

13 hours ago