ಮೈಸೂರು: ಆಷಾಡ ಮಾಸದ ಮೊದಲನೇ ಶುಕ್ರವಾರವಾದ ಇಂದು (ಜುಲೈ.12) ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕಾಗಿ ತಂಡೋಪತಂಡವಾಗಿ ಜನಸಾಗರವೇ ಹರಿದುಬರುತ್ತಿದೆ.
ಚಾಮುಂಡಿ ತಾಯಿಗೆ ಮೊದಲ ಶುಕ್ರವಾರವಾದ ಇಂದು ಸಿಂಹದೇವಿನಿ ಅಲಂಕಾರ ಮಾಡಲಾಗಿದೆ. ರೇಷ್ಮೆ ಸೀರೆ, ವಿವಿಧ ಬಣ್ಣದ ಹೂಗಳಿಂದ ದೇವಿ ಹಾಗೂ ದೇವಾಲಯವನ್ನು ಸಿಂಗಾರಗೊಳಿಸಲಾಗಿದೆ.
ದೇವಿಯ ದರ್ಶನ ಮಾಡಲು ವಿವಿಧ ಜಿಲ್ಲೆಗಳು ಸೇರಿದಂತೆ ಅನೇಕ ಕಡೆಗಳಿಂದ ಜನರು ಬರುತ್ತಿದ್ದಾರೆ. ಇಂದು ಮುಂಜಾನೆ 3.30ರ ಸಮಯದಿಂದಲೇ ದೇಗುಲದಲ್ಲಿ ದೇವಿಗೆ ಪೂಜೆ ಆರಂಭವಾಗಿದೆ. ಸಹಸ್ರ ನಾಮಾರ್ಚನೆ, ರುದ್ರಾಭಿಷೇಕ, ಪಂಚಾಮೃತಾಭಿಷೇಕಗಳನ್ನು ನೆರವೇರಿಸಲಾಗಿದೆ.
ಜನರಿಗೆ ದೇವಿಯ ದರ್ಶನಕ್ಕಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದ ಮುಕ್ತ ಅವಕಾಶ ನೀಡಲಾಗಿದೆ.
ಪ್ರತಿವರ್ಷದಂತೆ ಈ ವರ್ಷವೂ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿರ್ಭಂದ ವಿಧಿಸಲಾಗಿದ್ದು, ಭಕ್ತರು ತಡ ರಾತ್ರಿಯಿಂದಲೇ ನಗರದ ಲಲಿತ್ ಮಹಲ್ ಸಮೀಪದ ಜಾಗದಲ್ಲಿ ತಮ್ಮ ಖಾಸಗಿ ವಾಹನಗಳನ್ನು ನಿಲ್ಲಿಸಿ ಅಲ್ಲಿಂದ ಸಾರಿಗೆ ಬಸ್ ಮೂಲಕ ಪ್ರಯಾಣ ಮಾಡುತ್ತಿದ್ದಾರೆ.
ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ…
ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್ಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಉಸ್ತುವಾರಿ…
ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…
ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…
ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.…