ಮೈಸೂರು: ಆಷಾಡ ಮಾಸದ ಮೊದಲನೇ ಶುಕ್ರವಾರವಾದ ಇಂದು (ಜುಲೈ.12) ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕಾಗಿ ತಂಡೋಪತಂಡವಾಗಿ ಜನಸಾಗರವೇ ಹರಿದುಬರುತ್ತಿದೆ.
ಚಾಮುಂಡಿ ತಾಯಿಗೆ ಮೊದಲ ಶುಕ್ರವಾರವಾದ ಇಂದು ಸಿಂಹದೇವಿನಿ ಅಲಂಕಾರ ಮಾಡಲಾಗಿದೆ. ರೇಷ್ಮೆ ಸೀರೆ, ವಿವಿಧ ಬಣ್ಣದ ಹೂಗಳಿಂದ ದೇವಿ ಹಾಗೂ ದೇವಾಲಯವನ್ನು ಸಿಂಗಾರಗೊಳಿಸಲಾಗಿದೆ.
ದೇವಿಯ ದರ್ಶನ ಮಾಡಲು ವಿವಿಧ ಜಿಲ್ಲೆಗಳು ಸೇರಿದಂತೆ ಅನೇಕ ಕಡೆಗಳಿಂದ ಜನರು ಬರುತ್ತಿದ್ದಾರೆ. ಇಂದು ಮುಂಜಾನೆ 3.30ರ ಸಮಯದಿಂದಲೇ ದೇಗುಲದಲ್ಲಿ ದೇವಿಗೆ ಪೂಜೆ ಆರಂಭವಾಗಿದೆ. ಸಹಸ್ರ ನಾಮಾರ್ಚನೆ, ರುದ್ರಾಭಿಷೇಕ, ಪಂಚಾಮೃತಾಭಿಷೇಕಗಳನ್ನು ನೆರವೇರಿಸಲಾಗಿದೆ.
ಜನರಿಗೆ ದೇವಿಯ ದರ್ಶನಕ್ಕಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದ ಮುಕ್ತ ಅವಕಾಶ ನೀಡಲಾಗಿದೆ.
ಪ್ರತಿವರ್ಷದಂತೆ ಈ ವರ್ಷವೂ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿರ್ಭಂದ ವಿಧಿಸಲಾಗಿದ್ದು, ಭಕ್ತರು ತಡ ರಾತ್ರಿಯಿಂದಲೇ ನಗರದ ಲಲಿತ್ ಮಹಲ್ ಸಮೀಪದ ಜಾಗದಲ್ಲಿ ತಮ್ಮ ಖಾಸಗಿ ವಾಹನಗಳನ್ನು ನಿಲ್ಲಿಸಿ ಅಲ್ಲಿಂದ ಸಾರಿಗೆ ಬಸ್ ಮೂಲಕ ಪ್ರಯಾಣ ಮಾಡುತ್ತಿದ್ದಾರೆ.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…