ಮೈಸೂರು: ಆಷಾಡ ಮಾಸದ ಮೊದಲನೇ ಶುಕ್ರವಾರವಾದ ಇಂದು (ಜುಲೈ.12) ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕಾಗಿ ತಂಡೋಪತಂಡವಾಗಿ ಜನಸಾಗರವೇ ಹರಿದುಬರುತ್ತಿದೆ.
ಚಾಮುಂಡಿ ತಾಯಿಗೆ ಮೊದಲ ಶುಕ್ರವಾರವಾದ ಇಂದು ಸಿಂಹದೇವಿನಿ ಅಲಂಕಾರ ಮಾಡಲಾಗಿದೆ. ರೇಷ್ಮೆ ಸೀರೆ, ವಿವಿಧ ಬಣ್ಣದ ಹೂಗಳಿಂದ ದೇವಿ ಹಾಗೂ ದೇವಾಲಯವನ್ನು ಸಿಂಗಾರಗೊಳಿಸಲಾಗಿದೆ.
ದೇವಿಯ ದರ್ಶನ ಮಾಡಲು ವಿವಿಧ ಜಿಲ್ಲೆಗಳು ಸೇರಿದಂತೆ ಅನೇಕ ಕಡೆಗಳಿಂದ ಜನರು ಬರುತ್ತಿದ್ದಾರೆ. ಇಂದು ಮುಂಜಾನೆ 3.30ರ ಸಮಯದಿಂದಲೇ ದೇಗುಲದಲ್ಲಿ ದೇವಿಗೆ ಪೂಜೆ ಆರಂಭವಾಗಿದೆ. ಸಹಸ್ರ ನಾಮಾರ್ಚನೆ, ರುದ್ರಾಭಿಷೇಕ, ಪಂಚಾಮೃತಾಭಿಷೇಕಗಳನ್ನು ನೆರವೇರಿಸಲಾಗಿದೆ.
ಜನರಿಗೆ ದೇವಿಯ ದರ್ಶನಕ್ಕಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದ ಮುಕ್ತ ಅವಕಾಶ ನೀಡಲಾಗಿದೆ.
ಪ್ರತಿವರ್ಷದಂತೆ ಈ ವರ್ಷವೂ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿರ್ಭಂದ ವಿಧಿಸಲಾಗಿದ್ದು, ಭಕ್ತರು ತಡ ರಾತ್ರಿಯಿಂದಲೇ ನಗರದ ಲಲಿತ್ ಮಹಲ್ ಸಮೀಪದ ಜಾಗದಲ್ಲಿ ತಮ್ಮ ಖಾಸಗಿ ವಾಹನಗಳನ್ನು ನಿಲ್ಲಿಸಿ ಅಲ್ಲಿಂದ ಸಾರಿಗೆ ಬಸ್ ಮೂಲಕ ಪ್ರಯಾಣ ಮಾಡುತ್ತಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…