ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ಚಿಟ್ ನೀಡಿದೆ. ಸಿಎಂ ಅವರಿಗೆ ನಮ್ಮ ಬೆಂಬಲ ಇದೆ ಎಂದು ದೆಹಲಿ ಹೈಕಮಾಂಡ್ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಗುರುವಾರ ಮೈಸೂರಿನಲ್ಲಿ ಹೇಳಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಆರೋಪಗಳಿಗೆ ಉತ್ತರ ನೀಡಿದ ಯತೀಂದ್ರ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರದ್ದು ಯಾವುದೇ ತಪ್ಪಿಲ್ಲ ಎಂದು ಹೈಕಮಾಂಡ್ ಹೇಳಿದ್ದು, ನಮ್ಮ ಪಕ್ಷದ ನಾಯಕರ ಬೆಂಬಲ, ಕಾರ್ಯಕರ್ತರು, ಸಾರ್ವಜನಿಕರ ಬೆಂಬಲ ನಮಗೆ ಸಿಕ್ಕದೆ ಎಂದರು.
ಸುಳ್ಳು ಸುದ್ದಿ ಹರಡಿಸಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಬೀಳಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ. ಇದು ನಡೆಯದಂತೆ ನಾವು ಎಲ್ಲಾ ರೀತಿಯ ಹೋರಾಟಕ್ಕೂ ಸಿದ್ದರಿದ್ದೇವೆ ಎಂದರು.
ಬಿಜೆಪಿ-ಜೆಡಿಎಸ್ ಆರೋಪ ನಮ್ಮ ತಂದೆಯವರ ಪ್ರಾಮಾಣಿಕ ರಾಜಕೀಯ ಜೀವನವನ್ನು ತಿಳಿಸಿದಂತಾಗುತ್ತದೆ. ಸಿದ್ದರಾಮಯ್ಯ ಅವರ ವಿಚಾರ ಸಂಕೀರ್ಣಗಳ ಮೂಲಕ ಬಿಜಪಿಯ ದುರುದ್ದೇಶವನ್ನು ಸಾರ್ವಜನಿಕರಿಗೆ ತಿಳಿಸಿದ ಕಾರ್ಯಕರ್ತರಿಗೆ ಕೃತಜ್ಞತೆಗಳು ಎಂದು ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…