ಮೈಸೂರು

ಹೈಕಮಾಂಡ್ ನೀನು ಸಿಎಂ ಆಗು ಅಂದ್ರೆ ನಾನು ಸಿದ್ಧ : ಪ್ರಿಯಾಂಕ್ ಖರ್ಗೆ

ಮೈಸೂರು : ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ. ಜಿಲ್ಲಾ ಪಂಚಾಯತ್ ಸದಸ್ಯರಿಂದ ಹಿಡಿದು ಶಾಸಕರವರೆಗೆ ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ. ಆದರೆ ಅವರ ಹೇಳಿಕೆ, ಕಲ್ಲಿನ ಕೆತ್ತಿದ ಶಾಸನವಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ತಿಳಿಸಿದರು.

ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ? ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಯಾಗಿದೆ. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರೂ ಸಿಗುತ್ತಿತ್ತು ಎಂದು ವ್ಯಂಗ್ಯವಾಡಿದರು.

ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರು ಸಿಗುತ್ತಿತ್ತು. ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದರು.

ಜೆಡಿಎಸ್‌ನ ಕುಟುಂಬದವರು ಹೋಗಿ ಮಾಡಿಕೊಂಡು ಬಂದ ಮೈತ್ರಿ ಇದು. ರಾಜ್ಯದ ಬಿಜೆಪಿ ನಾಯಕರು ಸಹ ಹೋಗಿಲ್ಲ. ರೇಣುಕಾಚಾರ್ಯ, ಮಾಜಿ ಸಚಿವರು, ಮಾಜಿ ಸಿಎಂ ಎಲ್ಲರನ್ನೂ ಕತ್ತಲಲ್ಲಿಟ್ಟು ಮೈತ್ರಿ ಮಾಡಲಾಗಿದೆ. ಬಿಜೆಪಿಯವರು ತಮ್ಮದನ್ನ ತಾವು ನೋಡಿಕೊಳ್ಳಲಿ. ಕಾಂಗ್ರೆಸ್‌ನ ಚಿಂತೆ ಅವರಿಗೆ ಬೇಡ. ನಮ್ಮ ಆದ್ಯತೆ ಐದು ಗ್ಯಾರಂಟಿಗಳನ್ನ ಅನುಷ್ಠಾನ ಮಾಡುವುದು ಎಂದು ತಿಳಿಸಿದರು.

lokesh

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

9 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

9 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

9 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

10 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

10 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

10 hours ago