ಮೈಸೂರು : ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ. ಜಿಲ್ಲಾ ಪಂಚಾಯತ್ ಸದಸ್ಯರಿಂದ ಹಿಡಿದು ಶಾಸಕರವರೆಗೆ ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ. ಆದರೆ ಅವರ ಹೇಳಿಕೆ, ಕಲ್ಲಿನ ಕೆತ್ತಿದ ಶಾಸನವಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ತಿಳಿಸಿದರು.
ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ? ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಯಾಗಿದೆ. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರೂ ಸಿಗುತ್ತಿತ್ತು ಎಂದು ವ್ಯಂಗ್ಯವಾಡಿದರು.
ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರು ಸಿಗುತ್ತಿತ್ತು. ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದರು.
ಜೆಡಿಎಸ್ನ ಕುಟುಂಬದವರು ಹೋಗಿ ಮಾಡಿಕೊಂಡು ಬಂದ ಮೈತ್ರಿ ಇದು. ರಾಜ್ಯದ ಬಿಜೆಪಿ ನಾಯಕರು ಸಹ ಹೋಗಿಲ್ಲ. ರೇಣುಕಾಚಾರ್ಯ, ಮಾಜಿ ಸಚಿವರು, ಮಾಜಿ ಸಿಎಂ ಎಲ್ಲರನ್ನೂ ಕತ್ತಲಲ್ಲಿಟ್ಟು ಮೈತ್ರಿ ಮಾಡಲಾಗಿದೆ. ಬಿಜೆಪಿಯವರು ತಮ್ಮದನ್ನ ತಾವು ನೋಡಿಕೊಳ್ಳಲಿ. ಕಾಂಗ್ರೆಸ್ನ ಚಿಂತೆ ಅವರಿಗೆ ಬೇಡ. ನಮ್ಮ ಆದ್ಯತೆ ಐದು ಗ್ಯಾರಂಟಿಗಳನ್ನ ಅನುಷ್ಠಾನ ಮಾಡುವುದು ಎಂದು ತಿಳಿಸಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…