ಮೈಸೂರು : ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ. ಜಿಲ್ಲಾ ಪಂಚಾಯತ್ ಸದಸ್ಯರಿಂದ ಹಿಡಿದು ಶಾಸಕರವರೆಗೆ ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ. ಆದರೆ ಅವರ ಹೇಳಿಕೆ, ಕಲ್ಲಿನ ಕೆತ್ತಿದ ಶಾಸನವಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ತಿಳಿಸಿದರು.
ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ? ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಯಾಗಿದೆ. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರೂ ಸಿಗುತ್ತಿತ್ತು ಎಂದು ವ್ಯಂಗ್ಯವಾಡಿದರು.
ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರು ಸಿಗುತ್ತಿತ್ತು. ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದರು.
ಜೆಡಿಎಸ್ನ ಕುಟುಂಬದವರು ಹೋಗಿ ಮಾಡಿಕೊಂಡು ಬಂದ ಮೈತ್ರಿ ಇದು. ರಾಜ್ಯದ ಬಿಜೆಪಿ ನಾಯಕರು ಸಹ ಹೋಗಿಲ್ಲ. ರೇಣುಕಾಚಾರ್ಯ, ಮಾಜಿ ಸಚಿವರು, ಮಾಜಿ ಸಿಎಂ ಎಲ್ಲರನ್ನೂ ಕತ್ತಲಲ್ಲಿಟ್ಟು ಮೈತ್ರಿ ಮಾಡಲಾಗಿದೆ. ಬಿಜೆಪಿಯವರು ತಮ್ಮದನ್ನ ತಾವು ನೋಡಿಕೊಳ್ಳಲಿ. ಕಾಂಗ್ರೆಸ್ನ ಚಿಂತೆ ಅವರಿಗೆ ಬೇಡ. ನಮ್ಮ ಆದ್ಯತೆ ಐದು ಗ್ಯಾರಂಟಿಗಳನ್ನ ಅನುಷ್ಠಾನ ಮಾಡುವುದು ಎಂದು ತಿಳಿಸಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…