ಮೈಸೂರು

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ ಏಕತಾ ಮಾಲ್(ಯೂನಿಟಿ ಮಾಲ್) ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಕರ್ನಾಟಕ ವಸ್ತು ಪ್ರದರ್ಶನ ಪ್ರಾಽಕಾರದ ಆವರಣದಲ್ಲಿ ಕೈಗೊಂಡಿರುವ ಏಕತಾ ಮಾಲ್ ನಿರ್ಮಾಣ ಕಾಮಗಾರಿಗೆ ಪ್ರಾರಂಭದಲ್ಲೇ ಕಾನೂನು ತೊಡಕು ಎದುರಾಗಿದ್ದು, ನ್ಯಾಯಾಲಯದಲ್ಲಿ ಇತ್ಯರ್ಥವಾಗುವ ತನಕವೂ ಮುಂದುವರಿಯದಂತಾಗಿದೆ. ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರು ಸಲ್ಲಿಸಿರುವ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್ ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಸಿಲ್ದಾರ್, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ ಎರಡು ವಾರಗಳೊಳಗೆ ಲಿಖಿತ ಉತ್ತರ ನೀಡುವಂತೆ ಸೂಚನೆ ನೀಡಿದೆ.

ಜಿಐ ಟ್ಯಾಗ್ ಹೊಂದಿರುವ ದೇಶೀಯ ಉತ್ಪನ್ನಗಳು, ಪಾರಂಪರಿಕ ಕರಕುಶಲ ವಸ್ತುಗಳು, ಆಯಾಯ ಜಿಲ್ಲೆಗಳಲ್ಲಿರುವ ಪ್ರಮುಖ ಉತ್ಪನ್ನಗಳನ್ನು ಪರಿಚಯ ಮಾಡಿಕೊಡುವ ಜತೆಗೆ, ಮಾರಾಟಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಏಕತಾ ಮಾಲ್ ನಿರ್ಮಾಣ ಯೋಜನೆಗೆ ಅನುಮೋದನೆ ನೀಡಿ, ೧೯೩ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. ಇದರ ನಿರ್ಮಾಣದ ಹೊಣೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಅಭಿವೃದ್ಧಿ ಮಂಡಳಿಗೆ ವಹಿಸಲಾಗಿತ್ತು. ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಯೂನಿಟಿ ಮಾಲ್ ನಿರ್ಮಾಣಕ್ಕೆ ಬೇಕಾದ ಆರು ಎಕರೆ ಭೂಮಿಯನ್ನು ಹಸ್ತಾಂತರ ಮಾಡಿತ್ತು. ಇದರಿಂದಾಗಿ ಈ ಜಾಗದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿ ಆರಂಭಿಸಲಾಗಿತ್ತು. ಇದೀಗ ಪ್ರಮೋದಾದೇವಿ ಒಡೆಯರ್ ಅವರು, ಯೂನಿಟಿ ಮಾಲ್ ನಿರ್ಮಿಸುತ್ತಿರುವ ಕುರುಬಾರಹಳ್ಳಿ ಸರ್ವೆ ನಂಬರ್ ಭೂಮಿ, ಗರಿಕೆಮಾಳ ಸರ್ವೆ ನಂ. ೧ರ ೬.೫ ಎಕರೆ ಪ್ರದೇಶವು ತಮ್ಮದೆಂದು ನ್ಯಾಯಾಲಯದ ಮೊರೆ ಹೋಗಿದ್ದರು. ಭೂಮಿಯು ರಾಜಮನೆತನಕ್ಕೆ ಸೇರಿದೆಂದು ಹೇಳಿರುವ ಜತೆಗೆ, ಕೆಲವು ಸರ್ವೆ ನಂಬರ್ ಭೂಮಿಯು ರಾಜಮನೆತನಕ್ಕೆ ಸೇರಿದ್ದೆಂದು ತೀರ್ಪು ಬಂದಿತ್ತು. ಇದರ ಆಧಾರದ ಮೇಲೆ ಪ್ರಮೋದಾದೇವಿ ಒಡೆಯರ್ ಅವರು ಹೈಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ಕೋರಿದ್ದರು. ಅರ್ಜಿದಾರರ ಮನವಿ ಪುರಸ್ಕರಿಸಿದ ನ್ಯಾಯಾಽಶರು, ಕಾಮಗಾರಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶ ನೀಡಿದ್ದಾರೆ. ಇದರಿಂದಾಗಿ ಸದ್ಯಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

59 seconds ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

42 mins ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

2 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

2 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

2 hours ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

2 hours ago