ಮೈಸೂರು

ನೈಸರ್ಗಿಕವಾಗಿ ಬೆಳೆದ ಮಾವಿನ ಹಣ್ಣಿಗೆ ಭಾರಿ ಬೇಡಿಕೆ

ಮೈಸೂರು : ಮೈಸೂರಿನ ಕುವೆಂಪುನಗರದ ಬಳಿ ಎರಡು ದಿನಗಳ ಕಾಲ ನಡೆಯುವ ಮಾವಿನ ಹಣ್ಣುಗಳ ಸಂತೆ ಮೇಳದಲ್ಲಿ ಹಲವು ಬಗೆಯ ಹಣ್ಣುಗಳು, ತರಕಾರಿ ಹಾಗೂ ಸೊಪ್ಪುಗಳ ಮಾರಾಟ ಗಮನ ಸೆಳೆದಿದೆ.

ರಾಸಾಯನಿಕ ಗೊಬ್ಬರ ಬಳಸದೆ ನೈಸರ್ಗಿಕವಾಗಿ ಬೆಳೆದ ಹಣ್ಣುಗಳು, ತರಕಾರಿ ಹಾಗೂ ವಿವಿಧ ಸೊಪ್ಪುಗಳ ಮಾರಾಟ ಮಾಡುವ ಹಣ್ಣುಗಳ ಸಂತೆಯಲ್ಲಿ ಮೊದಲ ದಿನವೇ ಗ್ರಾಹಕರು ಖರೀದಿಯ ಭರಾಟೆ ಜೋರಾಗಿತ್ತು,

ಮೂರು ಎಕರೆ ಜಾಗದಲ್ಲಿ ಕೃಷಿ ಬೇಸಾಯ ಮಾಡುವ ರೈತ ಅವಿನಾಶ್ ಅವರು ಮೈಸೂರಿನ ಹೊರವಲಯದಲ್ಲಿರು ತಮ್ಮ ಮೂರು ಎಕರೆ ಜಮೀನಿನಲ್ಲಿ ತಮ್ಮ ಕುಟುಂಬಕ್ಕೆ ಬೇಕಾಗುವ ಆಹಾರ ಪದಾರ್ಥಗಳನ್ನು ಬೆಳೆದು ಜೊತೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಬಗೆಯ ಹಣ್ಣುಗಳು, ತರಕಾರಿಗಳನ್ನು ಯಾವುದೇ ರಾಸಾಯನಿಕ ಗೊಬ್ಬರ ಬಳಸದೆ ನೈಸರ್ಗಿಕವಾಗಿ ಬೆಳೆದ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದೂ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನೈಸರ್ಗಿಕ ಪದಾರ್ಥಗಳನ್ನು ಖರೀದಿಸುತ್ತಿದ್ದಾರೆ.

ಇಂದು ಮತ್ತು ನಾಳೆ ನಡೆಯುವ 2 ದಿನಗಳ ಹಣ್ಣುಗಳ ಸಂತೆಯಲ್ಲಿ ಮಲ್ಲಿಕಾ ಮಾವು, ಬಾಳೆಕಾಯಿ, ಬಾಳೆ ದಿಂಡು, ತೆಂಗಿನ ಕಾಯಿ, ಕರಿಬೇವು, ಎಳೆನೀರು, ತೆಂಗಿನಕಾಯಿ, ಸ್ಟಾರ್ ಫ್ರುಟ್ಸ್ ಸೇರಿದಂತೆ ಅನೇಕ ಉತ್ಪನ್ನ ಗಳನ್ನು ಮಾರಾಟ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

2 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

7 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

23 hours ago