ಮೈಸೂರು: ಪ್ರಾಚೀನ ಕಾಲದ ನಾಣ್ಯ, ನೋಟುಗಳು ಇತಿಹಾಸ ತಿಳಿಸುವ ಸಾಧನವಾಗಿವೆ. ನಾಣ್ಯಗಳಿಂದ ಅಂದಿನ ಕಾಲದ ಆರ್ಥಿಕ, ಸಾಮಾಜಿಕ ಹಾಗೂ ಸೈನಿಕ ವ್ಯವಸ್ಥೆಗಳ ಬಗ್ಗೆ ತಿಳಿಯಬಹುದು ಎಂದು ಸಂಪನ್ಮೂಲ ವ್ಯಕ್ತಿ ಗೌತಮ್ ಜಂತಕಲ್ ಹೇಳಿದರು.
ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ‘ಕರ್ನಾಟಕ ನಾಣ್ಯ ಪರಂಪರೆ’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುರಾತತ್ವ ಉತ್ಖನನದ ವೇಳೆ ದೊರೆತ ನಾಣ್ಯಗಳು, ಅಂದಿನ ಸಾಮ್ರಾಜ್ಯದ ಸಾಮ್ರಾಟರ ಕಾಲಾನುಕ್ರಮಗಳ ಬಗ್ಗೆ ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದರು.
ಉತ್ಖನನದ ವೇಳೆ ಸಿಗುವ ಮಡಿಕೆ, ಕಲ್ಲಿನ ಚೂರುಗಳಲ್ಲಿ ಕಾಲಮಾನ ಇರಲ್ಲ. ಆದರೆ, ನಾಣ್ಯಗಳಲ್ಲಿ ರಾಜನ ಚಿತ್ರ, ದೇವ-ದೇವಿಯರ ಚಿತ್ರ ಸೇರಿದಂತೆ ಅನೇಕ ಮಾಹಿತಿ ಇರುತ್ತದೆ. ಇದರಿಂದ ಆಡಳಿತಯುಗ, ಧಾರ್ಮಿಕ ನಂಬಿಕೆಗಳು ಹೀಗೆ ಎಲ್ಲವೂ ತಿಳಿಯಲಿದೆ. ಉತ್ಖನನದಲ್ಲಿ ದೊರಕುವ ನಾಣ್ಯದ ಮಹತ್ವ ಅಪಾರ ಎಂದು ವಿವರಿಸಿದರು.
ಇತಿಹಾಸದ ಆರಂಭ ಕಾಲದ ನಾಣ್ಯಗಳಿಂದ ಬ್ರಿಟಿಸ್ ಈಸ್ಟ್ ಇಂಡಿಯಾ ಕಂಪನಿಯವರೆಗೂ ನಾಣ್ಯಗಳು ನಮಗೆ ಉತ್ಖನನದ ವೇಳೆ ದೊರಕಿವೆ. ಇವು ಇತಿಹಾಸ ರಚಿಸುವಲ್ಲಿ ವಿದ್ವಾಂಸರುಗಳಿಗೆ ಪೂರಕವಾಗಿವೆ. ಮೌರ್ಯರು, ಶಾತವಾಹನರು, ಕದಂಬರು, ರಾಷ್ಟ್ರಕೂಟರು ಹಾಗೂ ಗಂಗರ ಕಾಲದ ನಾಣ್ಯಗಳು ಅಂದಿನ ಕಾಲದ ರಾಜಕೀಯ, ಆರ್ಥಿಕ, ಧಾರ್ಮಿಕ, ಸಾಮಾಜಿಕ ಹಾಗೂ ತಾಂತ್ರಿಕ ಇತಿಹಾಸದ ಬಗ್ಗೆ ತಿಳಿಸುತ್ತದೆ. ದೇಶ, ವಿದೇಶಗಳ ಸ್ವಾತಂತ್ರ್ಯಪೂರ್ವ ಮತ್ತು ನಂತರದ ನಾಣ್ಯಗಳು ಹಾಗೂ ನೋಟುಗಳನ್ನು ಸಂಗ್ರಹಿಸಲಾಗಿದೆ. ಇವುಗಳ ವೀಕ್ಷಣೆಯಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಿದೆ ಎಂದು ಅಭಿಪ್ರಾಯಪಟ್ಟರು.
ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜು ಮಾತನಾಡಿ, ನಮ್ಮ ಇಲಾಖೆಯಿಂದ ಈವರೆಗೂ ಸುಮಾರು 9 ಸಾವಿರು ಶಾಸನಗಳನ್ನು ಪತ್ತೆ ಹಚ್ಚಿ ಸಂರಕ್ಷಿಸುವ ಕೆಲಸ ನಡೆದಿದೆ. ಇದಲ್ಲದೆ ಪುರಾತತ್ವ ವಿದ್ಯಾರ್ಥಿ, ಸಂಶೋಧಕರ ನೆರವಿನಿಂದ ಗ್ರಾಮವಾರು ಸ್ಮಾರಕ, ವೀರಗಲ್ಲು, ಮಾಸ್ತಿಗಲ್ಲುಗಳ ಸರ್ವೇಕಾರ್ಯ ಮಾಡಲಾಗಿದೆ. ಪುರಾತತ್ವ ಎಲ್ಲರಿಗೂ ತಿಳಿಯಬೇಕೆಂಬುದು ನಮ್ಮ ಇಚ್ಛೆ ಎಂದು ಹೇಳಿದರು.
ಈವರೆಗೂ 510ಕ್ಕೂ ಹೆಚ್ಚು ಕೇಂದ್ರ ಸಂರಕ್ಷಿತ ಪ್ರದೇಶ ಹಾಗೂ 810 ರಾಜ್ಯ ಸಂರಕ್ಷಿತ ಪ್ರದೇಶವೆಂದು ಗುರುತಿಸಲಾಗಿದೆ. ಇನ್ನೂ ಎಷ್ಟೋ ಸ್ಮಾರಕಗಳು ಮಣ್ಣಲ್ಲಿ ಉದುಗಿಹೋಗಿವೆ. ನಿಮ್ಮ ನಿಮ್ಮ ಸ್ಥಳೀಯ ಪ್ರದೇಶದಲ್ಲಿ ಕಾಣಸಿಗುವ ವೀರಗಲ್ಲು, ಮಾಸ್ತಿಗಲ್ಲು ಹಾಗೂ ಸ್ಮಾರಕಗಳನ್ನು ಗುರುತಿಸಿ ಹತ್ತಿರದ ತಾಲೂಕು ಅಧಿಕಾರಿ ಹಾಗೂ ಪುರಾತತ್ವ ಇಲಾಖೆಗೆ ಮಾಹಿತಿ ನೀಡಿ. ಪರಂಪರೆ ಉಳಿಸುವ ನಿಟ್ಟಿನಲ್ಲಿ ನಮ್ಮ ಕಾರ್ಯಕ್ಕೆ ಕೈಜೋಡಿಸಿ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶೆಲ್ವಪಿಳ್ಳೈ ಅಯ್ಯಂಗಾರ್, ಪುರಾತತ್ವ ಇಲಾಖೆ ಉಪ ನಿರ್ದೇಶಕಿ ಸಿ.ಎನ್. ಮಂಜುಳಾ, ಪುಟ್ಟಸ್ವಾಮಿ, ರಾಕೇಶ್ ಸೇರಿದಂತೆ ಪುರಾತತ್ವ ವಿದ್ಯಾರ್ಥಿಗಳು ಹಾಜರಿದ್ದರು.
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…
ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…
ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…
ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…
ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…
ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…