ಮೈಸೂರು

ಇತಿಹಾಸ ತಿಳಿಸುವ ನಾಣ್ಯ, ನೋಟುಗಳು : ಗೌತಮ್‌ ಜಂತಕಲ್

ಮೈಸೂರು: ಪ್ರಾಚೀನ ಕಾಲದ ನಾಣ್ಯ, ನೋಟುಗಳು ಇತಿಹಾಸ ತಿಳಿಸುವ ಸಾಧನವಾಗಿವೆ. ನಾಣ್ಯಗಳಿಂದ ಅಂದಿನ ಕಾಲದ ಆರ್ಥಿಕ, ಸಾಮಾಜಿಕ ಹಾಗೂ ಸೈನಿಕ ವ್ಯವಸ್ಥೆಗಳ ಬಗ್ಗೆ ತಿಳಿಯಬಹುದು ಎಂದು ಸಂಪನ್ಮೂಲ ವ್ಯಕ್ತಿ ಗೌತಮ್‌ ಜಂತಕಲ್ ಹೇಳಿದರು.

ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ‘ಕರ್ನಾಟಕ ನಾಣ್ಯ ಪರಂಪರೆ’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುರಾತತ್ವ ಉತ್ಖನನದ ವೇಳೆ ದೊರೆತ ನಾಣ್ಯಗಳು, ಅಂದಿನ ಸಾಮ್ರಾಜ್ಯದ ಸಾಮ್ರಾಟರ ಕಾಲಾನುಕ್ರಮಗಳ ಬಗ್ಗೆ ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದರು.

ಉತ್ಖನನದ ವೇಳೆ ಸಿಗುವ ಮಡಿಕೆ, ಕಲ್ಲಿನ ಚೂರುಗಳಲ್ಲಿ ಕಾಲಮಾನ ಇರಲ್ಲ. ಆದರೆ, ನಾಣ್ಯಗಳಲ್ಲಿ ರಾಜನ ಚಿತ್ರ, ದೇವ-ದೇವಿಯರ ಚಿತ್ರ ಸೇರಿದಂತೆ ಅನೇಕ ಮಾಹಿತಿ ಇರುತ್ತದೆ. ಇದರಿಂದ ಆಡಳಿತಯುಗ, ಧಾರ್ಮಿಕ ನಂಬಿಕೆಗಳು ಹೀಗೆ ಎಲ್ಲವೂ ತಿಳಿಯಲಿದೆ. ಉತ್ಖನನದಲ್ಲಿ ದೊರಕುವ ನಾಣ್ಯದ ಮಹತ್ವ ಅಪಾರ ಎಂದು ವಿವರಿಸಿದರು.

ಇತಿಹಾಸದ ಆರಂಭ ಕಾಲದ ನಾಣ್ಯಗಳಿಂದ ಬ್ರಿಟಿಸ್‌ ಈಸ್ಟ್‌ ಇಂಡಿಯಾ ಕಂಪನಿಯವರೆಗೂ ನಾಣ್ಯಗಳು ನಮಗೆ ಉತ್ಖನನದ ವೇಳೆ ದೊರಕಿವೆ. ಇವು ಇತಿಹಾಸ ರಚಿಸುವಲ್ಲಿ ವಿದ್ವಾಂಸರುಗಳಿಗೆ ಪೂರಕವಾಗಿವೆ. ಮೌರ್ಯರು, ಶಾತವಾಹನರು, ಕದಂಬರು, ರಾಷ್ಟ್ರಕೂಟರು ಹಾಗೂ ಗಂಗರ ಕಾಲದ ನಾಣ್ಯಗಳು ಅಂದಿನ ಕಾಲದ ರಾಜಕೀಯ, ಆರ್ಥಿಕ, ಧಾರ್ಮಿಕ, ಸಾಮಾಜಿಕ ಹಾಗೂ ತಾಂತ್ರಿಕ ಇತಿಹಾಸದ ಬಗ್ಗೆ ತಿಳಿಸುತ್ತದೆ. ದೇಶ, ವಿದೇಶಗಳ ಸ್ವಾತಂತ್ರ್ಯಪೂರ್ವ ಮತ್ತು ನಂತರದ ನಾಣ್ಯಗಳು ಹಾಗೂ ನೋಟುಗಳನ್ನು ಸಂಗ್ರಹಿಸಲಾಗಿದೆ. ಇವುಗಳ ವೀಕ್ಷಣೆಯಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಿದೆ ಎಂದು ಅಭಿಪ್ರಾಯಪಟ್ಟರು.

ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜು ಮಾತನಾಡಿ, ನಮ್ಮ ಇಲಾಖೆಯಿಂದ ಈವರೆಗೂ ಸುಮಾರು 9 ಸಾವಿರು ಶಾಸನಗಳನ್ನು ಪತ್ತೆ ಹಚ್ಚಿ ಸಂರಕ್ಷಿಸುವ ಕೆಲಸ ನಡೆದಿದೆ. ಇದಲ್ಲದೆ ಪುರಾತತ್ವ ವಿದ್ಯಾರ್ಥಿ, ಸಂಶೋಧಕರ ನೆರವಿನಿಂದ ಗ್ರಾಮವಾರು ಸ್ಮಾರಕ, ವೀರಗಲ್ಲು, ಮಾಸ್ತಿಗಲ್ಲುಗಳ ಸರ್ವೇಕಾರ್ಯ ಮಾಡಲಾಗಿದೆ. ಪುರಾತತ್ವ ಎಲ್ಲರಿಗೂ ತಿಳಿಯಬೇಕೆಂಬುದು ನಮ್ಮ ಇಚ್ಛೆ ಎಂದು ಹೇಳಿದರು.

ಈವರೆಗೂ 510ಕ್ಕೂ ಹೆಚ್ಚು ಕೇಂದ್ರ ಸಂರಕ್ಷಿತ ಪ್ರದೇಶ ಹಾಗೂ 810 ರಾಜ್ಯ ಸಂರಕ್ಷಿತ ಪ್ರದೇಶವೆಂದು ಗುರುತಿಸಲಾಗಿದೆ. ಇನ್ನೂ ಎಷ್ಟೋ ಸ್ಮಾರಕಗಳು ಮಣ್ಣಲ್ಲಿ ಉದುಗಿಹೋಗಿವೆ. ನಿಮ್ಮ ನಿಮ್ಮ ಸ್ಥಳೀಯ ಪ್ರದೇಶದಲ್ಲಿ ಕಾಣಸಿಗುವ ವೀರಗಲ್ಲು, ಮಾಸ್ತಿಗಲ್ಲು ಹಾಗೂ ಸ್ಮಾರಕಗಳನ್ನು ಗುರುತಿಸಿ ಹತ್ತಿರದ ತಾಲೂಕು ಅಧಿಕಾರಿ ಹಾಗೂ ಪುರಾತತ್ವ ಇಲಾಖೆಗೆ ಮಾಹಿತಿ ನೀಡಿ. ಪರಂಪರೆ ಉಳಿಸುವ ನಿಟ್ಟಿನಲ್ಲಿ ನಮ್ಮ ಕಾರ್ಯಕ್ಕೆ ಕೈಜೋಡಿಸಿ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶೆಲ್ವಪಿಳ್ಳೈ ಅಯ್ಯಂಗಾರ್, ಪುರಾತತ್ವ ಇಲಾಖೆ ಉಪ ನಿರ್ದೇಶಕಿ ಸಿ.ಎನ್. ಮಂಜುಳಾ, ಪುಟ್ಟಸ್ವಾಮಿ, ರಾಕೇಶ್ ಸೇರಿದಂತೆ ಪುರಾತತ್ವ ವಿದ್ಯಾರ್ಥಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

2 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

3 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

3 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

3 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

3 hours ago