ಮೈಸೂರು

ಹುಣ್ಣಿಮೆ ದಿನದಂದು ಕವಿಗೋಷ್ಟಿ ನಡೆಸಿ : ಹೆಚ್.ಪಿ ಮಂಜುನಾಥ್‌ ಸಲಹೆ

ಹುಣಸೂರು : ರಾಜ್ಯದ ಎರಡನೇ ದೊಡ್ಡ ಆಲದ ಮರವನ್ನು ಸಂರಕ್ಷಿಸಿ, ಆಮೂಲಕ ಜಾನಪದ ಜಾತ್ರೆ ಆಯೋಜಿಸಿರುವ ಗ್ರಾಮಸ್ಥರು ಇನ್ಮುಂದೆ ಈ ಸ್ಥಳದಲ್ಲಿ ಹುಣ್ಣಿಮೆ ಬೆಳದಿಂಗಳಲ್ಲಿ ಕವಿಗೋಷ್ಠಿ ನಡೆಸಿ ಎಂದು ಮಾಜಿ ಶಾಸಕ ಹೆಚ್.ಪಿ ಮಂಜುನಾಥ್‌ ಸಲಹೆ ನೀಡಿದರು.

ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ದ ರಾಜ್ಯದ ಎರಡನೇ ದೊಡ್ಡ ಆಲದ ಮರದ ಪ್ರಪ್ರಥಮ ಜಾನಪದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೊಡ್ಡ ಆಲದ ಮರದ ಸಂರಕ್ಷಣೆ ಆಶಯ ಒಳ್ಳೆಯದೆ, ಇದರ ಅಭಿವೃದ್ದಿಗೆ ಸಹಕಾರ ನೀಡುವೆ. ಈ ಐತಿಹಾಸಿಕ ಮರದ ಬಗ್ಗೆ ಹೆಚ್ಚು ಪ್ರಚುರಪಡಿಸಬೇಕು. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಹುಣ್ಣಿಮೆಯ ಬೆಳದಿಂಗಳಿನಲ್ಲಿ ವಿದ್ವಾಂಸರು, ಇತಿಹಾಸಕಾರರನ್ನು ಕರೆಸಿ ಕವಿಗೋಷ್ಟಿ ನಡೆಸಿ, ಪ್ರಕೃತಿ ಸಂಬಂಧಿತ ಕಾರ್ಯಕ್ರಮ ಆಯೋಜಿಸಿ. ಈ ಕಾರ್ಯಕ್ರಮಕ್ಕೆ ತಾವು ಸಂಪೂರ್ಣ ಸಹಕಾರ ನೀಡುವುದಾಗಿ ಪ್ರಕಟಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ | ಮಾದರಿ ಗ್ರಾಮ ಸೌಂದಾಳ

ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…

4 mins ago

ಓದುಗರ ಪತ್ರ | ಪಿಯುಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…

13 mins ago

ಓದುಗರ ಪತ್ರ | ಹೆಚ್ಚುವರಿ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…

18 mins ago

ಬಿಜೆಪಿ- ಕಾಂಗ್ರೆಸ್ ನಡುವೆ ಏಕಿಷ್ಟು ದ್ವೇಷ?

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಸಂಸತ್ತಿನ ಎರಡು ವಾರಗಳ ಮೊದಲ ಹಂತದ ಬಜೆಟ್ ಅಧಿವೇಶನ ನಿಮುಗಿಯಿತು. ಮತ್ತೆ ಎರಡನೇ ಹಂತದ…

1 hour ago

ಇಂದಿನಿಂದ ಮಾ.13ರವರೆಗೆ ಕಪ್ಪಡಿ ಕ್ಷೇತ್ರದ ಜಾತ್ರೆ

• ರಾಜ್ಯದ ವಿವಿಧ ಕಡೆಗಳಿಂದ ಜನರ ಆಗಮನ • ಒಂದು ತಿಂಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಭೇರ್ಯ ಮಹೇಶ್…

1 hour ago

ಹಾವಾಡಿಸುವ ಮುಬಾರಕನ ಬದುಕು ಪಾಡು

• ಅಕ್ಷತಾ ಮೂವತ್ತರ ಆಸುಪಾಸಿನ ಕಪ್ಪು ಜಾಕೆಟ್ ತೊಟ್ಟಿದ್ದ ಸ್ಪುರದ್ರೂಪಿ ಯುವಕ. ತನ್ನ ಹಿಪ್ಪಿ ಕೂದಲನ್ನು ಬೆರಳಿನಿಂದ ಸರಿಸಿ ಮತ್ತೆ…

2 hours ago