ಮೈಸೂರು

ಸಾಲು ಸಾಲು ಸರಣಿ ರಜೆ : ಮೈಸೂರಿನ ಪ್ರವಾಸಿ ತಾಣಗಳಲ್ಲಿ ಜನಸ್ಥೋಮ

ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಭಾರೀ ಜನಸ್ಥೋಮ ಕಂಡುಬಂತು.

ಯುಗಾದಿ ಹಬ್ಬದಂದು ಮೈಸೂರು ಅರಮನೆ, ಚಾಮುಂಡೇಶ್ವರಿ ದೇವಸ್ಥಾನ ಮತ್ತು ಬೃಂದಾವನ ಉದ್ಯಾನಗಳಲ್ಲಿ ಭಕ್ತರು ಮತ್ತು ಪ್ರವಾಸಿಗರು ದಟ್ಟಣೆಯಾಗಿ ಆಗಮಿಸಿದ್ದರು. ರಂಜಾನ್ ಮುಗಿಯುವ ಸಂದರ್ಭದಲ್ಲಿ ಈದ್ ರಜೆಯೂ ಸೇರಿಕೊಂಡಿದ್ದರಿಂದ ಬೆಂಗಳೂರು, ಇತರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿಗೆ ಆಗಮಿಸಿದ್ದಾರೆ. ಇದರಿಂದ ಮೈಸೂರು ಅರಮನೆಯಲ್ಲಿ ಟಿಕೆಟ್ ಕೌಂಟರ್‌ಗಳ ಬಳಿ ದೊಡ್ಡ ಸರತಿ ಸಾಲುಗಳು, ಚಾಮುಂಡಿ ಬೆಟ್ಟದಲ್ಲಿ ವಾಹನ ದಟ್ಟಣೆ ಮತ್ತು ಬೃಂದಾವನ ಉದ್ಯಾನದಲ್ಲಿ ಜನರ ಗುಂಪುಗಳು ಕಂಡುಬಂತು.

ಮೈಸೂರು ಅರಮನೆಯಲ್ಲಿ ಯುಗಾದಿ ಸಂದರ್ಭದಲ್ಲಿ ವಿಶೇಷ ದೀಪಾಲಂಕಾರ ಮತ್ತು ಸಂಗೀತ ಸಂಜೆ ಕಾರ್ಯಕ್ರಮ ನಡೆಯುತ್ತಿದ್ದು, ಇದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಚಾಮುಂಡೇಶ್ವರಿ ದೇವಾಲಯದಲ್ಲಿ ಯುಗಾದಿ ವಿಶೇಷ ಪೂಜೆಗಳು ನಡೆದಿದ್ದು, ಭಕ್ತಾಧಿಗಳ ದಟ್ಟಣೆ ಹೆಚ್ಚಾಗಿದೆ. ಮೈಸೂರು ಮೃಗಲಾಯ ಮತ್ತು ಇತರ ಸ್ಥಳಗಳಲ್ಲೂ ಕುಟುಂಬಗಳೊಂದಿಗೆ ಪ್ರವಾಸಿಗರು ಹೆಚ್ಚಾಗಿ ಕಂಡುಬಂದಿದ್ದಾರೆ.

ಹೆಚ್ಚುವರಿ ಪೊಲೀಸ್‌ ಇದ್ದರು ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದು ಅಲ್ಲಲ್ಲಿ ಕಂಡುಬಂತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

4 mins ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

15 mins ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

1 hour ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

1 hour ago

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

3 hours ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

3 hours ago