ಮೈಸೂರು

ಗೃಹರಕ್ಷಕರು ತರಬೇತಿ ಪಡೆದ ನಂತರ ನಾಗರೀಕರ ಸಂಕಷ್ಟಗಳಿಗೆ ಸ್ಪಂದಿಸಬೇಕು : ಸಿ.ಶಿವರಾಜು

ಮೈಸೂರು : ಗೃಹರಕ್ಷಕದಳ ಸ್ವಯಂಸೇವಾ ಸಂಸ್ಥೆ ಯಾಗಿದ್ದು ಹೊಸದಾಗಿ ನೊಂದಾವಣೆಯಾಗಿರುವ ಗೃಹರಕ್ಷಕರು ತರಬೇತಿ ಪಡೆದ ನಂತರ ನಾಗರೀಕರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂದು ಅಪರ ಜಿಲ್ಲಾಧಿಕಾಕಾರಿ ಸಿ.ಶಿವರಾಜು ಸೂಚಿಸಿದರು.

ಜ್ಯೋತಿ ನಗರದ ಡಿಎಆರ್ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗೃಹರಕ್ಷಕರ ಮೂಲ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸರಿಗೆ ಸರಿ ಸಮಾನರಾಗಿ ಸ್ವಯಂ ಸೇವಕ ಗೃಹರಕ್ಷಕರು ಎಲ್ಲೆಡೆ ಕೆಲಸ ಮಾಡುತ್ತಿದ್ದು.ಇತ್ತೀಚಿನ ದಿನಗಳಲ್ಲಿ ಪೊಲೀಸ್ ಕೊರತೆಯನ್ನು ನೀಗಿಸುತ್ತಿದೆ ಅಲ್ಲದೆ ರಾಜ್ಯದಲ್ಲಿನ ಎಲ್ಲ ಇಲಾಖೆಗಳಲ್ಲೂ ಗೃಹರಕ್ಷಕರಿಗೆ ಬೇಡಿಕೆ ಇದೆ ಎಂದರು.

ಹಲವು ಕಚೇರಿಗಳಲ್ಲಿ, ಜಾತ್ರೆ, ಸಂಚಾರ ನಿಯಂತ್ರಣ, ರೈಲ್ವೆ,  ಕಾನೂನು ಸುವ್ಯವಸ್ಥೆ ಕರ್ತವ್ಯಗಳಿಗೂ ನಿಯೋಜಿಸಲಾಗುತ್ತಿದೆ ಎಂದರು.

ತರಬೇತಿ ವೇಳೆಯಲ್ಲಿ ಕಲಿತತದ್ದನ್ನು ಸಬ್ದಳಕೆ ಮಾಡಿಕೊಂಡು ತೊಂದರೆಗೊಳಗಾದ ಸಾರ್ವಜನಿಕರಿಗೆ ನೆರವಾಗಬೇಕು.
ಜೊತೆಗೆ ನಿಮ್ಮ ಆರೋಗ್ಯದ ಕಡೆಗೂ ಗಮನ ಕೊಡುವುದು ಸಹ ಅವಶ್ಯವೆಂಬುದನ್ನರಿತು ಕೆಲಸಗಳ್ಲಿ ತೊಡಗಿಸಿಕೊಳ್ಳಿ ಎಂದು ಸಲಹ ನೀಡಿದರು.

ಜಿಲ್ಲಾ ಸಮಾದೇಷ್ಟರಾದ (ಕಮಾಂಡೆಂಟ್) ಡಾ. ಎಂ. ಕಾಂತರಾಜು ಮಾತನಾಡಿ ಇಲಾಖೆಯ ಉದ್ದೇಶ ಮತ್ತು ಸಿಗುವ ಸವಲತ್ತುಗಳ ಕುರಿತು ಮಾಹಿತಿ ನೀಡಿ. ಪ್ರಶಿಕ್ಷಣಾರ್ಥಿಗಳಿಗೆ 10 ದಿನಗಳ ಕಾಲ ತರಬೇತಿ ನೀಡಲಾಗುತ್ತಿದೆ.

ಇಲ್ಲಿ ಮೂಲ ತರಬೆತಿ ಪಡೆದುಕೊಂಡ ನಂತರ ಇಲಾಖೆ ನೀಡುವ ಸಮವಸ್ತ್ರ ಉಚಿತವಾಗಿ ವಿತರಿಸಲಾಗುತ್ತದೆ.ಇದರೊಟ್ಟಿಗೆ ಆದ್ಯತೆ ಮೇಲೆ ವಿವಿಧ ಇಲಾಖೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ.

ಈವೇಳೆ ಇಲಾಖೆ ನಿಗದಿ ಪಡಿಸುವ ಭತ್ಯೆ ನೀಡಲಾಗುವುದು.ಅಲ್ಲದೆ ನಿಮ್ಮ ತಾಲೂಕುಗಳ್ಲಿ ನಡೆಯುವ ವಾರದ ಕವಾಯತುಗಳಿಗೆ ಹಾಜರಾಗುವುದು ಕಡ್ಡಾಯವಾಗಿದ್ದು.

ಕವಾಯತಿಗೆ ಹಾಜರಾಗುವ ವೇಳೆ ಪ್ರತಿ ಗೃಹರಕ್ಷಕರಿಗೆ ತಲಾ ೧೦೦ ರೂ ಅವರವರ ಖಾತೆಗೆ ನೇರವಾಗಿ ಜಮೆಯಾಗಲಿದೆ. ಆದ್ಯತೆ ಮೇರೆಗೆ ಕರ್ತವ್ಗಳಿಗೆ ನಿಯೋಜಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಚೇರಿಯ ಸಹಾಯಕ ಆಡಳಿತಾಧಿಕಾರಿ ಎಂ.ಎನ್ ವಿಶ್ವನಾಥ್ ,ಬೋಧಕರಾದ ಚಂದನ್, ಸಹಾಯಕ ಬೋಧಕ ಮಂಜುನಾಥ್, ಕ್ಯಾಂಪ್ ಕಮಾಂಡೆಂಟ್ ಸಂಪತ್ ಕುಮಾರ್, ಘಟಕಾಧಿಕಾರಿ ರೇವಣ್ಣ, ವಿದ್ಯಾ ಇದ್ದರು.

andolanait

Recent Posts

ಸಂಪಾದನೆ ಎಂಬ ಧರ್ಮ ಸಂಕಟಕ್ಕೆ ಸಿಲುಕಿ…

ದೇವನೂರ ಮಹಾದೇವ ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಟಿ.ಎಸ್.ರಾಮಸ್ವಾಮಿಯವರು ನೆಲಗನ್ನಡಕ್ಕೆ ಅನುವಾದಿಸಿರುವ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿಯ ಲೋಕಾರ್ಪಣೆ ಶನಿವಾರ ಸಂಜೆ…

49 mins ago

ಪ್ರವಾಸಿಗರಿಗೆ ಮುಕ್ತವಾದ ಮಾಂದಲ್‌ಪಟ್ಟಿ

ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…

53 mins ago

ಯತೀಂದ್ರಗೆ ನಗರಾಭಿವೃದ್ಧಿ; ಮೈಸೂರಿಗೆ ಯೋಜನೆಗಳ ಸಮೃದ್ಧಿ?

ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…

58 mins ago

ಬೀದಿ ದೀಪಗಳ ನಿರ್ವಹಣೆ ಕೊರತೆ; ಸಾರ್ವಜನಿಕರ ವ್ಯಥೆ

ಕೆ.ಪಿ.ಮದನ್ ಮೈಸೂರು: ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ವರದಿಗಳು ಪ್ರಕಟವಾಗುತ್ತಿವೆ. ಇತ್ತ ನಗರದ ಆಸುಪಾಸಿನಲ್ಲಿರುವ ಕೆಲ ಬಡಾವಣೆಗಳ…

1 hour ago

ಶಿಕ್ಷಕರ ಜೇಬಿಗೆ ಹೊರೆಯಾದ ಬಿಸಿಯೂಟ

ಎಸ್.ಎಸ್.ಭಟ್ ಬೇಳೆ, ಎಣ್ಣೆಗೆ ಶಿಕ್ಷಣ ಇಲಾಖೆ ವಿಧಿಸಿರುವ ದರವೇ ಶಿಕ್ಷಕರಿಗೆ ಹೊರೆ ನಂಜನಗೂಡು: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟ…

1 hour ago