arrested
ಮೈಸೂರು: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಹಣ ದೋಚುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ಐವರನ್ನು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಜಾಲದಲ್ಲಿ ಭಾಗಿಯಾಗಿದ್ದ ಪಿರಿಯಾಪಟ್ಟಣ ಠಾಣೆ ಕಾನ್ಸ್ಟೇಬಲ್ ಶಿವಣ್ಣ, ಮೂರ್ತಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳು ಕಂಪಲಾಪುರದ ಬಟ್ಟೆ ವ್ಯಾಪಾರಿ ದಿನೇಶ್ ಕುಮಾರ್ ಅವರನ್ನು ಖೆಡ್ಡಾಗೆ ಕೆಡವಿ ಬ್ಲ್ಯಾಕ್ಮೇಲ್ ಮಾಡಿ ಹಣ ದೋಚಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಯುವತಿಯೊಬ್ಬಳು ದಿನೇಶ್ ಅವರ ಬಟ್ಟೆ ಅಂಗಡಿಗೆ ತೆರಳಿ ಪರಿಚಯ ಮಾಡಿಕೊಂಡಿದ್ದಳು. ದಿನೇಶ್ ಕುಮಾರ್ ನಂಬರ್ ಪಡೆದು ವಾಟ್ಸಾಪ್ ಚಾಟಿಂಗ್ ಕೂಡ ಶುರು ಮಾಡಿದ್ದಳು. ಮನೆಯಲ್ಲಿ ಯಾರೂ ಇಲ್ಲ, ಕಾಫಿಗೆ ಬನ್ನಿ ಎಂದು ದಿನೇಶ್ ಕುಮಾರ್ಗೆ ಆಹ್ವಾನ ನೀಡಿದ್ದಳು.
ಯುವತಿ ಮಾತಿಗೆ ಮರುಳಾದ ದಿನೇಶ್ ಕುಮಾರ್ ಆಕೆಯ ಮನೆಗೆ ಹೋಗಿದ್ದಾರೆ. ಈ ವೇಳೆ ಮನೆಗೆ ನುಗ್ಗಿದ ಕಾನ್ಸ್ಟೇಬಲ್ ಶಿವಣ್ಣ ಹಾಗೂ ಮೂರ್ತಿ ದಿನೇಶ್ ಕುಮಾರ್ಗೆ ಹಿಗ್ಗಾಮುಗ್ಗಾ ಥಳಿಸಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ.
ಘಟನೆ ಬಗ್ಗೆ ಹೊರಗಡೆ ಹೇಳಬಾರದು ಎಂದರೆ 10 ಲಕ್ಷ ಹಣ ಕೊಡು ಎಂದು ಹೆದರಿಸಿದ್ದಾರೆ. ಈ ವೇಳೆ ದಿನೇಶ್ ಕುಮಾರ್ ಸಹೋದರನಿಗೆ ಕರೆ ಮಾಡಿ 10 ಲಕ್ಷ ಹಣ ತರುವಂತೆ ಹೇಳಿದ್ದಾರೆ.
10 ಲಕ್ಷ ಹಣ ತರುವಂತೆ ದಿನೇಶ್ ಹೇಳಲು ಕಾರಣವೇನು ಎಂದು ಅನುಮಾನಗೊಂಡಿದ್ದ ಸಹೋದರ ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಘಟನೆ ಬಗ್ಗೆ ತನಿಖೆ ನಡೆಸಿದ ಪೊಲೀಸರು ಕಾನ್ಸ್ಟೇಬಲ್ ಶಿವಣ್ಣ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…