arrested
ಮೈಸೂರು: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಹಣ ದೋಚುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ಐವರನ್ನು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಜಾಲದಲ್ಲಿ ಭಾಗಿಯಾಗಿದ್ದ ಪಿರಿಯಾಪಟ್ಟಣ ಠಾಣೆ ಕಾನ್ಸ್ಟೇಬಲ್ ಶಿವಣ್ಣ, ಮೂರ್ತಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳು ಕಂಪಲಾಪುರದ ಬಟ್ಟೆ ವ್ಯಾಪಾರಿ ದಿನೇಶ್ ಕುಮಾರ್ ಅವರನ್ನು ಖೆಡ್ಡಾಗೆ ಕೆಡವಿ ಬ್ಲ್ಯಾಕ್ಮೇಲ್ ಮಾಡಿ ಹಣ ದೋಚಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಯುವತಿಯೊಬ್ಬಳು ದಿನೇಶ್ ಅವರ ಬಟ್ಟೆ ಅಂಗಡಿಗೆ ತೆರಳಿ ಪರಿಚಯ ಮಾಡಿಕೊಂಡಿದ್ದಳು. ದಿನೇಶ್ ಕುಮಾರ್ ನಂಬರ್ ಪಡೆದು ವಾಟ್ಸಾಪ್ ಚಾಟಿಂಗ್ ಕೂಡ ಶುರು ಮಾಡಿದ್ದಳು. ಮನೆಯಲ್ಲಿ ಯಾರೂ ಇಲ್ಲ, ಕಾಫಿಗೆ ಬನ್ನಿ ಎಂದು ದಿನೇಶ್ ಕುಮಾರ್ಗೆ ಆಹ್ವಾನ ನೀಡಿದ್ದಳು.
ಯುವತಿ ಮಾತಿಗೆ ಮರುಳಾದ ದಿನೇಶ್ ಕುಮಾರ್ ಆಕೆಯ ಮನೆಗೆ ಹೋಗಿದ್ದಾರೆ. ಈ ವೇಳೆ ಮನೆಗೆ ನುಗ್ಗಿದ ಕಾನ್ಸ್ಟೇಬಲ್ ಶಿವಣ್ಣ ಹಾಗೂ ಮೂರ್ತಿ ದಿನೇಶ್ ಕುಮಾರ್ಗೆ ಹಿಗ್ಗಾಮುಗ್ಗಾ ಥಳಿಸಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ.
ಘಟನೆ ಬಗ್ಗೆ ಹೊರಗಡೆ ಹೇಳಬಾರದು ಎಂದರೆ 10 ಲಕ್ಷ ಹಣ ಕೊಡು ಎಂದು ಹೆದರಿಸಿದ್ದಾರೆ. ಈ ವೇಳೆ ದಿನೇಶ್ ಕುಮಾರ್ ಸಹೋದರನಿಗೆ ಕರೆ ಮಾಡಿ 10 ಲಕ್ಷ ಹಣ ತರುವಂತೆ ಹೇಳಿದ್ದಾರೆ.
10 ಲಕ್ಷ ಹಣ ತರುವಂತೆ ದಿನೇಶ್ ಹೇಳಲು ಕಾರಣವೇನು ಎಂದು ಅನುಮಾನಗೊಂಡಿದ್ದ ಸಹೋದರ ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಘಟನೆ ಬಗ್ಗೆ ತನಿಖೆ ನಡೆಸಿದ ಪೊಲೀಸರು ಕಾನ್ಸ್ಟೇಬಲ್ ಶಿವಣ್ಣ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…