ಮೈಸೂರು

ಮೈಸೂರು| ಹನಿಟ್ರ್ಯಾಪ್‌ ಪ್ರಕರಣ: ಕಾನ್ಸ್‌ಟೇಬಲ್‌ ಸೇರಿ ಐವರ ಬಂಧನ

ಮೈಸೂರು: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್‌ ಖೆಡ್ಡಾಗೆ ಕೆಡವಿ ಹಣ ದೋಚುತ್ತಿದ್ದ ಪೊಲೀಸ್‌ ಕಾನ್ಸ್‌ಟೇಬಲ್‌ ಸೇರಿದಂತೆ ಐವರನ್ನು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಜಾಲದಲ್ಲಿ ಭಾಗಿಯಾಗಿದ್ದ ಪಿರಿಯಾಪಟ್ಟಣ ಠಾಣೆ ಕಾನ್ಸ್‌ಟೇಬಲ್‌ ಶಿವಣ್ಣ, ಮೂರ್ತಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳು ಕಂಪಲಾಪುರದ ಬಟ್ಟೆ ವ್ಯಾಪಾರಿ ದಿನೇಶ್‌ ಕುಮಾರ್‌ ಅವರನ್ನು ಖೆಡ್ಡಾಗೆ ಕೆಡವಿ ಬ್ಲ್ಯಾಕ್‌ಮೇಲ್‌ ಮಾಡಿ ಹಣ ದೋಚಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಯುವತಿಯೊಬ್ಬಳು ದಿನೇಶ್‌ ಅವರ ಬಟ್ಟೆ ಅಂಗಡಿಗೆ ತೆರಳಿ ಪರಿಚಯ ಮಾಡಿಕೊಂಡಿದ್ದಳು. ದಿನೇಶ್‌ ಕುಮಾರ್‌ ನಂಬರ್‌ ಪಡೆದು ವಾಟ್ಸಾಪ್‌ ಚಾಟಿಂಗ್‌ ಕೂಡ ಶುರು ಮಾಡಿದ್ದಳು. ಮನೆಯಲ್ಲಿ ಯಾರೂ ಇಲ್ಲ, ಕಾಫಿಗೆ ಬನ್ನಿ ಎಂದು ದಿನೇಶ್‌ ಕುಮಾರ್‌ಗೆ ಆಹ್ವಾನ ನೀಡಿದ್ದಳು.

ಯುವತಿ ಮಾತಿಗೆ ಮರುಳಾದ ದಿನೇಶ್‌ ಕುಮಾರ್‌ ಆಕೆಯ ಮನೆಗೆ ಹೋಗಿದ್ದಾರೆ. ಈ ವೇಳೆ ಮನೆಗೆ ನುಗ್ಗಿದ ಕಾನ್ಸ್‌ಟೇಬಲ್‌ ಶಿವಣ್ಣ ಹಾಗೂ ಮೂರ್ತಿ ದಿನೇಶ್‌ ಕುಮಾರ್‌ಗೆ ಹಿಗ್ಗಾಮುಗ್ಗಾ ಥಳಿಸಿ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದಾರೆ.

ಘಟನೆ ಬಗ್ಗೆ ಹೊರಗಡೆ ಹೇಳಬಾರದು ಎಂದರೆ 10 ಲಕ್ಷ ಹಣ ಕೊಡು ಎಂದು ಹೆದರಿಸಿದ್ದಾರೆ. ಈ ವೇಳೆ ದಿನೇಶ್‌ ಕುಮಾರ್‌ ಸಹೋದರನಿಗೆ ಕರೆ ಮಾಡಿ 10 ಲಕ್ಷ ಹಣ ತರುವಂತೆ ಹೇಳಿದ್ದಾರೆ.

10 ಲಕ್ಷ ಹಣ ತರುವಂತೆ ದಿನೇಶ್‌ ಹೇಳಲು ಕಾರಣವೇನು ಎಂದು ಅನುಮಾನಗೊಂಡಿದ್ದ ಸಹೋದರ ಬೆಟ್ಟದಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಘಟನೆ ಬಗ್ಗೆ ತನಿಖೆ ನಡೆಸಿದ ಪೊಲೀಸರು ಕಾನ್ಸ್‌ಟೇಬಲ್‌ ಶಿವಣ್ಣ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

26 mins ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

48 mins ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

2 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

5 hours ago