lakshmi hebbalkar
ಮೈಸೂರು : ಸಾಧಕರ ಸಾಧನೆಯನ್ನು ಗುರುತಿಸಿ ಅವರನ್ನು ಸನ್ಮಾನಿಸುವುದೇ ನಿಜವಾದ ದೊಡ್ಡ ಸಾಧನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕೃಷ್ಣಮೂರ್ತಿಪುರಂನಲ್ಲಿರುವ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ ಹಾಗೂ ಹೋಟೆಲ್ ಮಾಲೀಕರ ಸಂಘ ಹಾಗೂ ಹೋಟೆಲ್ ಮಾಲೀಕರ ಧರ್ಮದತ್ತಿ ಸಹಯೋಗದೊಂದಿಗೆ ಮಹಿಳಾ ಹೋಟೆಲ್ ಉದ್ಯಮಿಗಳು ಹಾಗೂ ಸಮಾಜದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಶ್ರಮಿಕರನ್ನು ಅಭಿನಂದಿಸಿ ಮಾತನಾಡಿದ ಸಚಿವರು, ಸಮಾಜದಲ್ಲಿ ಸಾಧಕರನ್ನು ಗುರುತಿಸುವ ಕೆಲಸ ಆಗಬೇಕಿದೆ ಎಂದರು.
ಇವತ್ತಿನ ದಿನಗಳಲ್ಲಿ ಹೋಟೆಲ್ ಉದ್ಯಮ ಎಂಬುದು ತಮಾಷೆ ಅಲ್ಲ. ಎಲ್ಲಾ ವರ್ಗದವರನ್ನು ಅತಿಥಿ ದೇವೋಭವ ಅಂತ ಸೇವೆ ಮಾಡುವುದೇ ಹೋಟೆಲ್ ಉದ್ಯಮದ ಕೆಲಸ. ಮೈಸೂರಿನ ಹೋಟೆಲ್ ಉದ್ಯಮಿಗಳು, ಸಹಕಾರ ಬ್ಯಾಂಕ್ ಸ್ಥಾಪಿಸುವ ಮೂಲಕ ಎಲ್ಲರಿಗೂ ಆಶ್ರಯ ನೀಡುತ್ತಿದ್ದಾರೆ ಎಂದು ಹೇಳಿದರು. ನಾನು ಕೂಡ ಬೆಳಗಾವಿಯಲ್ಲಿ ಹೋಟೆಲ್ ಹೊಂದಿರುವೆ, ಎರಡು ಸಕ್ಕರೆ ಕಾರ್ಖಾನೆಯನ್ನು ಹೊಂದಿರುವೆ, ಹೀಗಾಗಿ ಹೋಟೆಲ್ ಉದ್ಯಮದ ಬಗ್ಗೆ ಅಲ್ಪ ಸ್ವಲ್ಪ ತಿಳಿದುಕೊಂಡಿರುವೆ ಎಂದರು. ಸಂಘಟನೆ, ಸಂಘ- ಸಂಸ್ಥೆಗಳನ್ನು ಕಟ್ಟುವುದು ತಮಾಷೆಯ ಮಾತಲ್ಲ.
ಇದನ್ನು ಓದಿ : ಜಾತಿ ಗಣತಿಯಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಮಧು ಬಂಗಾರಪ್ಪ
ಹಸಿದವರಿಗೆ ಅನ್ನ ಹಾಕುವ ಮೂಲಕ ಸಾಮಾಜಿಕ ಕಾರ್ಯಕ್ರಮವನ್ನು ಹೋಟೆಲ್ ಉದ್ಯಮದವರು ಮಾಡುತ್ತಿದ್ದಾರೆ. 25 ವರ್ಷಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಈ ಸೊಸೈಟಿಗೆ ಅಡಿಗಲ್ಲು ಹಾಕಿದ್ದರು. ಅವರೇ ಬೆಳ್ಳಿ ಹಬ್ಬದ ಸಮಾರಂಭವನ್ನು ಉದ್ಘಾಟನೆ ಮಾಡಿದ್ದಾರೆ. ಇದು ನಿಜಕ್ಕೂ ಸೊಸೈಟಿಯ ದೊಡ್ಡ ಸಾಧನೆ. ಈ ಹೋಟೆಲ್ ಸೊಸೈಟಿ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು. ಇವತ್ತು ಕರಾವಳಿ ಭಾಗದ ಉದ್ಯಮಿಗಳು ಅದರಲ್ಲೂ ಹೋಟೆಲ್ ಉದ್ಯಮಿಗಳು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಒಂದೊಂದು ಕೋಟಿ ರೂ. ದೇಣಿಗೆ ನೀಡುತ್ತಾರೆ.
ಇದು ಅವರ ಧನ್ಯತೆಯನ್ನು ತೋರುತ್ತದೆ ಎಂದರು. ವಿವಿಧ ಸ್ತರದ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಅದರಲ್ಲೂ ನರ್ಸ್ ಗಳ ಸೇವೆ ನಿಜಕ್ಕೂ ಶ್ಲಾಘನೀಯ, ನಾನು ಅಪಘಾತದಿಂದ ಆಸ್ಪತ್ರೆಯಲ್ಲಿದ್ದಾಗ ನರ್ಸ್ ಗಳೇ ನನಗೆ ಧೈರ್ಯ ತುಂಬಿದರು ಎಂದು ಹೇಳಿದರು. ಈ ವೇಳೆ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾರಾಯಣ ವಿ ಹೆಗಡೆ, ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣ ಗೌಡ ಸಿ, ರವಿ ಶಾಸ್ತ್ರಿ, ಆನಂದ್ ಎಂ.ಶೆಟ್ಟಿ, ಸುಮಿತ್ರ ಎ ತಂತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್…
ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…