ಮೈಸೂರು

ಹೋಟೆಲ್‌ ಮಾಲೀಕನಿಂದ ಯುವಕನ ಮೇಲೆ ಹಲ್ಲೆ : ಖಂಡನೀಯ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿಯ ಬಿಬಿಸಿ ಕಾಲೋನಿಯ ಅಲೆಮಾರಿ ಯುವಕ ಗಣೇಶ ಎಂಬಾತನಿಗೆ ಇತ್ತೀಚೆಗೆ ಹೋಟೆಲ್ ಮಾಲೀಕ ಜಯಣ್ಣ ಮತ್ತು ಇತರರು ಹಲ್ಲೆ ಮಾಡಿರುವುದನ್ನು ತಾಲ್ಲೂಕು ದಸಂಸ ತೀವ್ರವಾಗಿ ಖಂಡಿಸಿದೆ.

ಹಲ್ಲೆಗೊಳಗಾದ ಅಲೆಮಾರಿ ಯುವಕ ಗಣೇಶ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬುಧವಾರ ದಸಂಸ ಮುಖಂಡರು ಈತನನ್ನು ಭೇಟಿ ನೀಡಿ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ದಸಂಸ ಮುಖಂಡ ನಿಂಗರಾಜ್ ಮಲ್ಲಾಡಿ ಮಾತನಾಡಿ, ನಲ್ಲೂರು ಪಾಲದಲ್ಲಿ ಕೇರಳ ಮೂಲದ ಹೋಟೆಲ್ ಮಾಲೀಕನಾದ ಜಯಣ್ಣ, ಅನೀಸ್ ಎಂಬವರು ಗಣೇಶನಿಗೆ ಕೊಳೆತ ಮೊಟ್ಟೆಯನ್ನು ಕೊಟ್ಟ ವಿಚಾರವಾಗಿ ಪ್ರಶ್ನೆ ಮಾಡಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಆತನ ತಲೆಗೆ ಕಬ್ಬಿಣದ ಕುರ್ಪಿಯಿಂದ ಹಲ್ಲೆ ಮಾಡಿದ ಪರಿಣಾಮ ತಲೆಗೆ ಗಾಯವಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ಹೋಟೆಲ್ ಮಾಲೀಕ ಜಯಣ್ಣ ಮತ್ತು ಇತರರು ಗಣೇಶನ ವಿರುದ್ಧವೇ ಸುಳ್ಳು ಪ್ರಕರಣವನ್ನು ದಾಖಲು ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾಗಿದ್ದು ಹೋಟೆಲ್ ಮಾಲೀಕರೇ ಹಲ್ಲೆ ಮಾಡಿ ಹಲ್ಲೆಗೊಳಗಾದ ಗಣೇಶನ ಮೇಲೆಯೇ ದೂರು ಕೊಟ್ಟಿರುವುದು ಇವರ ದುಷ್ಟತನವನ್ನು ತೋರಿಸುತ್ತದೆ ಎಂದರು.

ಹಲ್ಲೆಗೊಳಗಾದ ಯುವಕ ಅಲೆಮಾರಿ ಸಮುದಾಯದವನಾಗಿದ್ದು, ಚಿಕಿತ್ಸೆಗೂ ಹಣವಿಲ್ಲದೆ ಪರದಾಡುವ ಸ್ಥಿತಿ ಇದೆ. ಪೊಲೀಸ್ ಇಲಾಖೆ ಈ ಬಗ್ಗೆ ಕೂಲಂಕುಶವಾಗಿ ತನಿಖೆ ಮಾಡಿ ಗಣೇಶನ ಮೇಲೆ ಹಲ್ಲೆ ಮಾಡಿರುವ ಹೋಟೆಲ್ ಮಾಲೀಕರನ್ನು ಬಂಽಸಬೇಕು. ನೊಂದ ಅಲೆಮಾರಿ ಗಣೇಶನಿಗೆ ರಕ್ಷಣೆ ಮತ್ತು ನ್ಯಾಯ ಕೊಡಿಸಬೇಕು. ಗಣೇಶನ ಮೇಲೆ ಕೊಟ್ಟಿರುವ ಸುಳ್ಳು ಪ್ರಕರಣವನ್ನು ವಜಾಗೊಳಿಸಬೇಕು ಎಂದು ಪೊಲೀಸ್ ಅಧಿಕಾರಿಗಳನ್ನು ದಸಂಸ ಒತ್ತಾಯಿಸುತ್ತದೆ ಎಂದರು.

ಈ ವಿಷಯವನ್ನು ಹುಣಸೂರು ಶಾಸಕರಾದ ಜಿ.ಡಿ.ಹರೀಶ್ ಗೌಡ ಅವರಿಗೆ ತಿಳಿಸಿದಾಗ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಗಣೇಶನನ್ನು ಸಂತೈಸಿ ಚಿಕಿತ್ಸೆಗೆ ೧೦ ಸಾವಿರ ರೂ. ಧನ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ ಎಂದರು.

ದಸಂಸದ ದೇವೇಂದ್ರ ಕುಳುವಾಡಿ, ಕಿರಿಜಾಜಿ ಗಜೇಂದ್ರ, ಬಿಬಿಸಿ ಅಲೆಮಾರಿ ಸಮಾಜದ ಮುಖಂಡರುಗಳಾದ ಅಣ್ಣಯ್ಯ, ರಮೇಶ, ಸಣ್ಣಸ್ವಾಮಿ, ರಾಮಕೃಷ್ಣ, ಶಿವಣ್ಣ, ವಿಷ್ಣು, ಕೃಷ್ಣ, ಗುಂಡ, ಅಣ್ಣಯ್ಯ ಬೋಡಿ ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

12 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

12 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

13 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

13 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

13 hours ago