ಮೈಸೂರು

ಹೋಟೆಲ್‌ ಮಾಲೀಕನಿಂದ ಯುವಕನ ಮೇಲೆ ಹಲ್ಲೆ : ಖಂಡನೀಯ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿಯ ಬಿಬಿಸಿ ಕಾಲೋನಿಯ ಅಲೆಮಾರಿ ಯುವಕ ಗಣೇಶ ಎಂಬಾತನಿಗೆ ಇತ್ತೀಚೆಗೆ ಹೋಟೆಲ್ ಮಾಲೀಕ ಜಯಣ್ಣ ಮತ್ತು ಇತರರು ಹಲ್ಲೆ ಮಾಡಿರುವುದನ್ನು ತಾಲ್ಲೂಕು ದಸಂಸ ತೀವ್ರವಾಗಿ ಖಂಡಿಸಿದೆ.

ಹಲ್ಲೆಗೊಳಗಾದ ಅಲೆಮಾರಿ ಯುವಕ ಗಣೇಶ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬುಧವಾರ ದಸಂಸ ಮುಖಂಡರು ಈತನನ್ನು ಭೇಟಿ ನೀಡಿ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ದಸಂಸ ಮುಖಂಡ ನಿಂಗರಾಜ್ ಮಲ್ಲಾಡಿ ಮಾತನಾಡಿ, ನಲ್ಲೂರು ಪಾಲದಲ್ಲಿ ಕೇರಳ ಮೂಲದ ಹೋಟೆಲ್ ಮಾಲೀಕನಾದ ಜಯಣ್ಣ, ಅನೀಸ್ ಎಂಬವರು ಗಣೇಶನಿಗೆ ಕೊಳೆತ ಮೊಟ್ಟೆಯನ್ನು ಕೊಟ್ಟ ವಿಚಾರವಾಗಿ ಪ್ರಶ್ನೆ ಮಾಡಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಆತನ ತಲೆಗೆ ಕಬ್ಬಿಣದ ಕುರ್ಪಿಯಿಂದ ಹಲ್ಲೆ ಮಾಡಿದ ಪರಿಣಾಮ ತಲೆಗೆ ಗಾಯವಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ಹೋಟೆಲ್ ಮಾಲೀಕ ಜಯಣ್ಣ ಮತ್ತು ಇತರರು ಗಣೇಶನ ವಿರುದ್ಧವೇ ಸುಳ್ಳು ಪ್ರಕರಣವನ್ನು ದಾಖಲು ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾಗಿದ್ದು ಹೋಟೆಲ್ ಮಾಲೀಕರೇ ಹಲ್ಲೆ ಮಾಡಿ ಹಲ್ಲೆಗೊಳಗಾದ ಗಣೇಶನ ಮೇಲೆಯೇ ದೂರು ಕೊಟ್ಟಿರುವುದು ಇವರ ದುಷ್ಟತನವನ್ನು ತೋರಿಸುತ್ತದೆ ಎಂದರು.

ಹಲ್ಲೆಗೊಳಗಾದ ಯುವಕ ಅಲೆಮಾರಿ ಸಮುದಾಯದವನಾಗಿದ್ದು, ಚಿಕಿತ್ಸೆಗೂ ಹಣವಿಲ್ಲದೆ ಪರದಾಡುವ ಸ್ಥಿತಿ ಇದೆ. ಪೊಲೀಸ್ ಇಲಾಖೆ ಈ ಬಗ್ಗೆ ಕೂಲಂಕುಶವಾಗಿ ತನಿಖೆ ಮಾಡಿ ಗಣೇಶನ ಮೇಲೆ ಹಲ್ಲೆ ಮಾಡಿರುವ ಹೋಟೆಲ್ ಮಾಲೀಕರನ್ನು ಬಂಽಸಬೇಕು. ನೊಂದ ಅಲೆಮಾರಿ ಗಣೇಶನಿಗೆ ರಕ್ಷಣೆ ಮತ್ತು ನ್ಯಾಯ ಕೊಡಿಸಬೇಕು. ಗಣೇಶನ ಮೇಲೆ ಕೊಟ್ಟಿರುವ ಸುಳ್ಳು ಪ್ರಕರಣವನ್ನು ವಜಾಗೊಳಿಸಬೇಕು ಎಂದು ಪೊಲೀಸ್ ಅಧಿಕಾರಿಗಳನ್ನು ದಸಂಸ ಒತ್ತಾಯಿಸುತ್ತದೆ ಎಂದರು.

ಈ ವಿಷಯವನ್ನು ಹುಣಸೂರು ಶಾಸಕರಾದ ಜಿ.ಡಿ.ಹರೀಶ್ ಗೌಡ ಅವರಿಗೆ ತಿಳಿಸಿದಾಗ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಗಣೇಶನನ್ನು ಸಂತೈಸಿ ಚಿಕಿತ್ಸೆಗೆ ೧೦ ಸಾವಿರ ರೂ. ಧನ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ ಎಂದರು.

ದಸಂಸದ ದೇವೇಂದ್ರ ಕುಳುವಾಡಿ, ಕಿರಿಜಾಜಿ ಗಜೇಂದ್ರ, ಬಿಬಿಸಿ ಅಲೆಮಾರಿ ಸಮಾಜದ ಮುಖಂಡರುಗಳಾದ ಅಣ್ಣಯ್ಯ, ರಮೇಶ, ಸಣ್ಣಸ್ವಾಮಿ, ರಾಮಕೃಷ್ಣ, ಶಿವಣ್ಣ, ವಿಷ್ಣು, ಕೃಷ್ಣ, ಗುಂಡ, ಅಣ್ಣಯ್ಯ ಬೋಡಿ ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

6 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

7 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

7 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

7 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

7 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

7 hours ago