ಮೈಸೂರು

ಹೋಟೆಲ್‌ ಮಾಲೀಕನಿಂದ ಯುವಕನ ಮೇಲೆ ಹಲ್ಲೆ : ಖಂಡನೀಯ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿಯ ಬಿಬಿಸಿ ಕಾಲೋನಿಯ ಅಲೆಮಾರಿ ಯುವಕ ಗಣೇಶ ಎಂಬಾತನಿಗೆ ಇತ್ತೀಚೆಗೆ ಹೋಟೆಲ್ ಮಾಲೀಕ ಜಯಣ್ಣ ಮತ್ತು ಇತರರು ಹಲ್ಲೆ ಮಾಡಿರುವುದನ್ನು ತಾಲ್ಲೂಕು ದಸಂಸ ತೀವ್ರವಾಗಿ ಖಂಡಿಸಿದೆ.

ಹಲ್ಲೆಗೊಳಗಾದ ಅಲೆಮಾರಿ ಯುವಕ ಗಣೇಶ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬುಧವಾರ ದಸಂಸ ಮುಖಂಡರು ಈತನನ್ನು ಭೇಟಿ ನೀಡಿ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ದಸಂಸ ಮುಖಂಡ ನಿಂಗರಾಜ್ ಮಲ್ಲಾಡಿ ಮಾತನಾಡಿ, ನಲ್ಲೂರು ಪಾಲದಲ್ಲಿ ಕೇರಳ ಮೂಲದ ಹೋಟೆಲ್ ಮಾಲೀಕನಾದ ಜಯಣ್ಣ, ಅನೀಸ್ ಎಂಬವರು ಗಣೇಶನಿಗೆ ಕೊಳೆತ ಮೊಟ್ಟೆಯನ್ನು ಕೊಟ್ಟ ವಿಚಾರವಾಗಿ ಪ್ರಶ್ನೆ ಮಾಡಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಆತನ ತಲೆಗೆ ಕಬ್ಬಿಣದ ಕುರ್ಪಿಯಿಂದ ಹಲ್ಲೆ ಮಾಡಿದ ಪರಿಣಾಮ ತಲೆಗೆ ಗಾಯವಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ಹೋಟೆಲ್ ಮಾಲೀಕ ಜಯಣ್ಣ ಮತ್ತು ಇತರರು ಗಣೇಶನ ವಿರುದ್ಧವೇ ಸುಳ್ಳು ಪ್ರಕರಣವನ್ನು ದಾಖಲು ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾಗಿದ್ದು ಹೋಟೆಲ್ ಮಾಲೀಕರೇ ಹಲ್ಲೆ ಮಾಡಿ ಹಲ್ಲೆಗೊಳಗಾದ ಗಣೇಶನ ಮೇಲೆಯೇ ದೂರು ಕೊಟ್ಟಿರುವುದು ಇವರ ದುಷ್ಟತನವನ್ನು ತೋರಿಸುತ್ತದೆ ಎಂದರು.

ಹಲ್ಲೆಗೊಳಗಾದ ಯುವಕ ಅಲೆಮಾರಿ ಸಮುದಾಯದವನಾಗಿದ್ದು, ಚಿಕಿತ್ಸೆಗೂ ಹಣವಿಲ್ಲದೆ ಪರದಾಡುವ ಸ್ಥಿತಿ ಇದೆ. ಪೊಲೀಸ್ ಇಲಾಖೆ ಈ ಬಗ್ಗೆ ಕೂಲಂಕುಶವಾಗಿ ತನಿಖೆ ಮಾಡಿ ಗಣೇಶನ ಮೇಲೆ ಹಲ್ಲೆ ಮಾಡಿರುವ ಹೋಟೆಲ್ ಮಾಲೀಕರನ್ನು ಬಂಽಸಬೇಕು. ನೊಂದ ಅಲೆಮಾರಿ ಗಣೇಶನಿಗೆ ರಕ್ಷಣೆ ಮತ್ತು ನ್ಯಾಯ ಕೊಡಿಸಬೇಕು. ಗಣೇಶನ ಮೇಲೆ ಕೊಟ್ಟಿರುವ ಸುಳ್ಳು ಪ್ರಕರಣವನ್ನು ವಜಾಗೊಳಿಸಬೇಕು ಎಂದು ಪೊಲೀಸ್ ಅಧಿಕಾರಿಗಳನ್ನು ದಸಂಸ ಒತ್ತಾಯಿಸುತ್ತದೆ ಎಂದರು.

ಈ ವಿಷಯವನ್ನು ಹುಣಸೂರು ಶಾಸಕರಾದ ಜಿ.ಡಿ.ಹರೀಶ್ ಗೌಡ ಅವರಿಗೆ ತಿಳಿಸಿದಾಗ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಗಣೇಶನನ್ನು ಸಂತೈಸಿ ಚಿಕಿತ್ಸೆಗೆ ೧೦ ಸಾವಿರ ರೂ. ಧನ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ ಎಂದರು.

ದಸಂಸದ ದೇವೇಂದ್ರ ಕುಳುವಾಡಿ, ಕಿರಿಜಾಜಿ ಗಜೇಂದ್ರ, ಬಿಬಿಸಿ ಅಲೆಮಾರಿ ಸಮಾಜದ ಮುಖಂಡರುಗಳಾದ ಅಣ್ಣಯ್ಯ, ರಮೇಶ, ಸಣ್ಣಸ್ವಾಮಿ, ರಾಮಕೃಷ್ಣ, ಶಿವಣ್ಣ, ವಿಷ್ಣು, ಕೃಷ್ಣ, ಗುಂಡ, ಅಣ್ಣಯ್ಯ ಬೋಡಿ ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago