ಸಾಲಿಗ್ರಾಮ : ತಾಲ್ಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮ ವ್ಯಾಪ್ತಿಯ ಕಳ್ಳಿಕೊಪ್ಪಲಿನಲ್ಲಿ ಮಳೆಯಿಂದ ವಾಸದ ಮನೆ ಗೋಡೆಯು ಕುಸಿದು ಬಿದ್ದಿದೆ.
ಗ್ರಾಮದ ಮಲ್ಲೇಗೌಡರ ಮಗ ಸ್ವಾಮಿ ಎಂಬವರಿಗೆ ಸೇರಿದ ವಾಸದ ಮನೆಯ ಪ್ರಮುಖ ಗೋಡೆಯು ಭಾರೀ ಮಳೆಯಿಂದಾಗಿ ಕುಸಿದುಬಿದ್ದಿದೆ. ಬಿದ್ದಂತಹ ಗೋಡೆಯು ಮನೆಯ ಒಳಭಾಗಕ್ಕೆ ಬೀಳದೆ ಹೊರಭಾಗಕ್ಕೆ ಬಿದ್ದಿದ್ದರಿಂದ ಮನೆಯಲ್ಲಿದ್ದವರಿಗೆ ಪ್ರಾಣಾಪಾಯವಾಗಿಲ್ಲ. ಆದರೆ, ಈ ಕುಟುಂಬಕ್ಕೆ ಅಪಾರ ನಷ್ಟ ಉಂಟಾಗಿದೆ.
ಇದನ್ನು ಓದಿ: ಭಾರಿ ಮಳೆಗೆ ಮನೆ ಗೋಡೆ ಕುಸಿತ
ಕಡು ಬಡತನದಿಂದ ಕೂಲಿ ಮಾಡಿ ಜೀವನ ಸಾಗಿಸುತ್ತಿರುವ ಸ್ವಾಮಿ ಅವರ ಕುಟುಂಬವು ಈ ಮನೆಯನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿದ್ದರು. ಆದರೆ ತಮ್ಮ ವಾಸದ ಮನೆಯ ಗೋಡೆಯು ಕುಸಿದು ಬಿದ್ದಿರುವುದರ ಜೊತೆಗೆ ಉಳಿದಿರುವ ಗೋಡೆಯು ಬಿರುಕು ಬಿಟ್ಟಿದ್ದು, ಅದು ಕೂಡ ಯಾವ ಕ್ಷಣದಲ್ಲಾದರೂ ಬೀಳುವ ಸಂಭವವಿದೆ.
ಘಟನಾ ಸ್ಥಳಕ್ಕೆ ಗ್ರಾಪಂ ಸದಸ್ಯ ಡಿ.ಕೃಷ್ಣ, ಮಾಜಿ ಉಪಾಧ್ಯಕ್ಷ ಕೋಮಲಾಚಾರಿ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದರು. ಸ್ವಾಮಿ ಅವರ ಕುಟುಂಬಕ್ಕೆ ತಾಲೂಕು ಹಾಗೂ ಜಿಲ್ಲಾಡಳಿತ ಸೂಕ್ತ ಪರಿಹಾರವನ್ನು ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…