ಸಾಲಿಗ್ರಾಮ : ತಾಲ್ಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮ ವ್ಯಾಪ್ತಿಯ ಕಳ್ಳಿಕೊಪ್ಪಲಿನಲ್ಲಿ ಮಳೆಯಿಂದ ವಾಸದ ಮನೆ ಗೋಡೆಯು ಕುಸಿದು ಬಿದ್ದಿದೆ.
ಗ್ರಾಮದ ಮಲ್ಲೇಗೌಡರ ಮಗ ಸ್ವಾಮಿ ಎಂಬವರಿಗೆ ಸೇರಿದ ವಾಸದ ಮನೆಯ ಪ್ರಮುಖ ಗೋಡೆಯು ಭಾರೀ ಮಳೆಯಿಂದಾಗಿ ಕುಸಿದುಬಿದ್ದಿದೆ. ಬಿದ್ದಂತಹ ಗೋಡೆಯು ಮನೆಯ ಒಳಭಾಗಕ್ಕೆ ಬೀಳದೆ ಹೊರಭಾಗಕ್ಕೆ ಬಿದ್ದಿದ್ದರಿಂದ ಮನೆಯಲ್ಲಿದ್ದವರಿಗೆ ಪ್ರಾಣಾಪಾಯವಾಗಿಲ್ಲ. ಆದರೆ, ಈ ಕುಟುಂಬಕ್ಕೆ ಅಪಾರ ನಷ್ಟ ಉಂಟಾಗಿದೆ.
ಇದನ್ನು ಓದಿ: ಭಾರಿ ಮಳೆಗೆ ಮನೆ ಗೋಡೆ ಕುಸಿತ
ಕಡು ಬಡತನದಿಂದ ಕೂಲಿ ಮಾಡಿ ಜೀವನ ಸಾಗಿಸುತ್ತಿರುವ ಸ್ವಾಮಿ ಅವರ ಕುಟುಂಬವು ಈ ಮನೆಯನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿದ್ದರು. ಆದರೆ ತಮ್ಮ ವಾಸದ ಮನೆಯ ಗೋಡೆಯು ಕುಸಿದು ಬಿದ್ದಿರುವುದರ ಜೊತೆಗೆ ಉಳಿದಿರುವ ಗೋಡೆಯು ಬಿರುಕು ಬಿಟ್ಟಿದ್ದು, ಅದು ಕೂಡ ಯಾವ ಕ್ಷಣದಲ್ಲಾದರೂ ಬೀಳುವ ಸಂಭವವಿದೆ.
ಘಟನಾ ಸ್ಥಳಕ್ಕೆ ಗ್ರಾಪಂ ಸದಸ್ಯ ಡಿ.ಕೃಷ್ಣ, ಮಾಜಿ ಉಪಾಧ್ಯಕ್ಷ ಕೋಮಲಾಚಾರಿ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದರು. ಸ್ವಾಮಿ ಅವರ ಕುಟುಂಬಕ್ಕೆ ತಾಲೂಕು ಹಾಗೂ ಜಿಲ್ಲಾಡಳಿತ ಸೂಕ್ತ ಪರಿಹಾರವನ್ನು ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…