ಮೈಸೂರು

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ ಐವರು ಖದೀಮರು ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ ನಿವಾಸಿ ಹರ್ಷ ಎಂಬವರೇ ವಂಚನೆಗೆ ಒಳಗಾದವರು. ಈ ಸಂಬಂಧ ಅವರು ಮೈಸೂರು ತಾಲ್ಲೂಕಿನ ಕೊಪ್ಪಲೂರು ಬಳಿಯ ಲೇಕ್ ವ್ಯೂ ಬಡಾವಣೆಯ ನಿವಾಸಿ ನಾರಾಯಣಶೆಟ್ಟಿ , ಕಾರ್ತಿಕ್, ಯಶವಂತಶೆಟ್ಟಿ, ಪ್ರವೀಣ್, ದೀಪಕ್ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.

ಘಟನೆಯ ವಿವರ:
ಧಾರವಾಡದ ಹೋಟೆಲ್‌ವೊಂದರಲ್ಲಿ ಹರ್ಷ ಅವರಿಗೆ ಯಶವಂತಶೆಟ್ಟಿ ಹಾಗೂ ಪ್ರವೀಣ್ ಎಂಬವರು, ನಾವು ಕಡಿಮೆ ಬಡ್ಡಿ ದರದಲ್ಲಿ ಕೈ ಸಾಲ ಕೊಡಿಸುವವರು ಎಂದು ಪರಿಚಯಿಸಿಕೊಂಡಿದ್ದಾರೆ. ನಂತರ ನೀವು ಮೈಸೂರಿಗೆ ಬಂದರೆ, ಹಣಕಾಸಿನ ವಿಚಾರ ಮಾತನಾಡಬಹುದು ಎಂದು ಹೇಳಿದ್ದಾರೆ. ಅವರ ಮಾತನ್ನು ನಂಬಿದ ಹರ್ಷ ಅವರು ಮೈಸೂರಿನ ಖಾಸಗಿ ಹೋಟೆಲ್‌ವೊಂದಕ್ಕೆ ಬಂದು ಉಳಿದುಕೊಂಡಿದ್ದಾರೆ. ನಂತರ 25 ಕೋಟಿ ರೂ. ಹಣವನ್ನು ಸಾಲವಾಗಿ ನೀಡಲು ಒಪ್ಪಿದ್ದಾರೆ. ಈ ಸಂಬಂಧ ಪತ್ರ ಮಾಡಿಸಬೇಕು ಎಂದು ಹೇಳಿ ಒಂದು ಕೋಟಿ ರೂ.ಗೆ, ಒಂದು ಲಕ್ಷ ರೂ. ಛಾಪಾ ಕಾಗದ ಖರೀದಿಸಬೇಕು ಎಂದು ಹೇಳಿದ್ದಾರೆ.

ಅವರ ಮಾತನ್ನು ನಂಬಿದ ಹರ್ಷ,25 ಕೋಟಿ ರೂ. ಸಾಲ ಪಡೆಯಬಹುದು ಎಂಬ ಆಸೆಯಿಂದ 25 ಲಕ್ಷ ರೂ. ನೀಡಿದ್ದಾರೆ. ನಂತರ ಆರೋಪಿಗಳು ತಾವು ಕೊಡಬೇಕಾದ ಹಣವನ್ನು ನಿಮ್ಮ ಮನೆಗೆ ತಲುಪಿಸುತ್ತೇವೆ ಎಂದು ಹೇಳಿ ಹರ್ಷ ಅವರನ್ನು ವಾಪಸ್ ಕಳುಹಿಸಿದ್ದಾರೆ. ಆದರೆ, ಸುಮಾರು ಒಂದು ತಿಂಗಳಾದರೂ ಹಣ ಮಾತ್ರ ಹರ್ಷ ಅವರ ಕೈ ಸೇರಲಿಲ್ಲ. ಹೀಗಾಗಿ ಅವರು ಮೈಸೂರಿಗೆ ಬಂದು ನಾರಾಯಣಶೆಟ್ಟಿ ಅವರ ಮನೆಗೆ ತೆರಳಿದ್ದಾರೆ. ಆದರೆ, ಆರೋಪಿಗಳೆಲ್ಲರೂ ಮನೆಯನ್ನು ಖಾಲಿ ಮಾಡಿದ್ದರು. ಅದರಿಂದ ಹರ್ಷ ಅವರಿಗೆ ತಾವು ಮೋಸ ಹೋಗಿರುವುದು ಅರ್ಥವಾಯಿತು. ಅವರು ಕೂಡಲೇ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

11 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago