ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ ಐವರು ಖದೀಮರು ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಹುಬ್ಬಳ್ಳಿ ನಿವಾಸಿ ಹರ್ಷ ಎಂಬವರೇ ವಂಚನೆಗೆ ಒಳಗಾದವರು. ಈ ಸಂಬಂಧ ಅವರು ಮೈಸೂರು ತಾಲ್ಲೂಕಿನ ಕೊಪ್ಪಲೂರು ಬಳಿಯ ಲೇಕ್ ವ್ಯೂ ಬಡಾವಣೆಯ ನಿವಾಸಿ ನಾರಾಯಣಶೆಟ್ಟಿ , ಕಾರ್ತಿಕ್, ಯಶವಂತಶೆಟ್ಟಿ, ಪ್ರವೀಣ್, ದೀಪಕ್ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.
ಘಟನೆಯ ವಿವರ:
ಧಾರವಾಡದ ಹೋಟೆಲ್ವೊಂದರಲ್ಲಿ ಹರ್ಷ ಅವರಿಗೆ ಯಶವಂತಶೆಟ್ಟಿ ಹಾಗೂ ಪ್ರವೀಣ್ ಎಂಬವರು, ನಾವು ಕಡಿಮೆ ಬಡ್ಡಿ ದರದಲ್ಲಿ ಕೈ ಸಾಲ ಕೊಡಿಸುವವರು ಎಂದು ಪರಿಚಯಿಸಿಕೊಂಡಿದ್ದಾರೆ. ನಂತರ ನೀವು ಮೈಸೂರಿಗೆ ಬಂದರೆ, ಹಣಕಾಸಿನ ವಿಚಾರ ಮಾತನಾಡಬಹುದು ಎಂದು ಹೇಳಿದ್ದಾರೆ. ಅವರ ಮಾತನ್ನು ನಂಬಿದ ಹರ್ಷ ಅವರು ಮೈಸೂರಿನ ಖಾಸಗಿ ಹೋಟೆಲ್ವೊಂದಕ್ಕೆ ಬಂದು ಉಳಿದುಕೊಂಡಿದ್ದಾರೆ. ನಂತರ 25 ಕೋಟಿ ರೂ. ಹಣವನ್ನು ಸಾಲವಾಗಿ ನೀಡಲು ಒಪ್ಪಿದ್ದಾರೆ. ಈ ಸಂಬಂಧ ಪತ್ರ ಮಾಡಿಸಬೇಕು ಎಂದು ಹೇಳಿ ಒಂದು ಕೋಟಿ ರೂ.ಗೆ, ಒಂದು ಲಕ್ಷ ರೂ. ಛಾಪಾ ಕಾಗದ ಖರೀದಿಸಬೇಕು ಎಂದು ಹೇಳಿದ್ದಾರೆ.
ಅವರ ಮಾತನ್ನು ನಂಬಿದ ಹರ್ಷ,25 ಕೋಟಿ ರೂ. ಸಾಲ ಪಡೆಯಬಹುದು ಎಂಬ ಆಸೆಯಿಂದ 25 ಲಕ್ಷ ರೂ. ನೀಡಿದ್ದಾರೆ. ನಂತರ ಆರೋಪಿಗಳು ತಾವು ಕೊಡಬೇಕಾದ ಹಣವನ್ನು ನಿಮ್ಮ ಮನೆಗೆ ತಲುಪಿಸುತ್ತೇವೆ ಎಂದು ಹೇಳಿ ಹರ್ಷ ಅವರನ್ನು ವಾಪಸ್ ಕಳುಹಿಸಿದ್ದಾರೆ. ಆದರೆ, ಸುಮಾರು ಒಂದು ತಿಂಗಳಾದರೂ ಹಣ ಮಾತ್ರ ಹರ್ಷ ಅವರ ಕೈ ಸೇರಲಿಲ್ಲ. ಹೀಗಾಗಿ ಅವರು ಮೈಸೂರಿಗೆ ಬಂದು ನಾರಾಯಣಶೆಟ್ಟಿ ಅವರ ಮನೆಗೆ ತೆರಳಿದ್ದಾರೆ. ಆದರೆ, ಆರೋಪಿಗಳೆಲ್ಲರೂ ಮನೆಯನ್ನು ಖಾಲಿ ಮಾಡಿದ್ದರು. ಅದರಿಂದ ಹರ್ಷ ಅವರಿಗೆ ತಾವು ಮೋಸ ಹೋಗಿರುವುದು ಅರ್ಥವಾಯಿತು. ಅವರು ಕೂಡಲೇ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…