ಮೈಸೂರು : ಜಿಲ್ಲೆಯಲ್ಲಿ ಅ.೧೭ ರಂದು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜನೆ ಮಾಡಲಾಗುತ್ತಿದೆ. ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಿರುದ್ಯೋಗ ಯುವಕ ಯುವತಿಯರ ನೊಂದಣಿ ಮಾಡಿಸಬೇಕು. ಈಗಾಗಲೇ ೧೬ ಸಾವಿರ ನೊಂದಣಿ ಆಗಿದೆ. ನೊಂದಣಿ ಪ್ರಕ್ರಿಯೆಯ ಡ್ರ್ತ್ಯೈವ್ ಮಾಡಿಸಬೇಕು. ನೋಂದಣಿ ಪ್ರಕ್ರಿಯೆಗೆ ಲಿಂಕ್ httpo://udyogamela.kodckarnataka.com/uoer/oignup ಮೂಲಕ ಮಾಡಿಕೊಳ್ಳಬೇಕು. ಬೃಹತ್ ಮೇಳದಲ್ಲಿ ೨೦೦ ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ತಂಬಾಕು ಹರಾಜು ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಒಡೆಯರ್ ಭಾಗಿ
ಉದ್ಯೋಗ ಮೇಳ ಕೇವಲ ಪದವಿ ಪಡೆದವರಿಗೆ ಮಾತ್ರವಲ್ಲ. ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿಗಳು ಸಹ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆಯಬಹುದಾಗಿದೆ. ಯುವ ನಿಽಯಲ್ಲಿ ನೋಂದಣಿ ಆಗಿರುವವರನ್ನು ನೋಂದಣಿ ಮಾಡಿಸಿ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಮಾಡಬೇಕು. ಉದ್ಯೋಗ ಮೇಳದ ಯಶಸ್ವಿಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯಲ್ಲಿ ಇರುವ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ಧಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ೧೧ ಸಾವಿರ ನಿರುದ್ಯೋಗಿಗಳು ಯುವನಿಽ ಯೋಜನೆಯಡಿ ನೋಂದಣಿ ಆಗಿದ್ದಾರೆ. ಇವರೆಲ್ಲರನ್ನೂ ಉದ್ಯೋಗ ಮೇಳದಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಮಾಹಿತಿ ನೀಡಿ ನೋಂದಣಿ ಮಾಡಿಸಿಕೊಳ್ಳಬೇಕು. ಕೇವಲ ನೋಂದಣಿ ಆಗುವದು ಮಾತ್ರವಲ್ಲ ಅವರೆಲ್ಲರೂ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಉದ್ಯೋಗ ವಿನಿಮಯ ಇಲಾಖೆಯ ಅಽಕಾರಿಗಳು ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಇರುವ ಖಾಸಗಿ ಕಂಪನಿಗಳು ಎನ್ ರೋಲ್ ಆಗುವಂತೆ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…