ಮೈಸೂರು

ನಾಳೆ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಮೈಸೂರು : ರಾಜ್ಯದಲ್ಲಿ ಉದ್ಯೋಗ ಕ್ರಾಂತಿ ಉಂಟು ಮಾಡಲು ಸಂಕಲ್ಪ ತೊಟ್ಟ ಕೌಶಲ್ಯಾಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಕಡೆಗಳಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಶುಕ್ರವಾರ ಸಾಂಸ್ಕೃತಿಕ ರಾಜಧಾನಿಯಲ್ಲಿ “ಬೃಹತ್‌ ಉದ್ಯೋಗ ಮೇಳ” ಆಯೋಜಿಸಿದೆ.

ಮೈಸೂರಿನ ಜಿಲ್ಲೆಯ ಮಹಾರಾಜ ಕಾಲೇಜು‌ ಮೈದಾನದಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ 24000 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 221 ಕಂಪನಿಗಳು ಭಾಗವಹಿಸಲಿದೆ. ಉದ್ಯೋಗ ಮೇಳದ ಕುರಿತು ಮಾಹಿತಿ ಪಡೆದುಕೊಂಡಿರುವ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಆರ್‌ ಪಾಟೀಲ್, ಆಕಾಂಕ್ಷಿಗಳಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದ್ದಾರೆ.

ಇದನ್ನು ಓದಿ: ಅಕ್ಟೋಬರ್.‌17ರಂದು ಮೈಸೂರಿನಲ್ಲಿ ಬೃಹತ್‌ ಉದ್ಯೋಗ ಮೇಳ: ಸಚಿವ ಡಾ.ಶರಣ ಪ್ರಕಾಶ್‌ ಆರ್ ಪಾಟೀಲ್

ನೋಂದಣಿ ಮಾಡಿಕೊಳ್ಳಿ
ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೇರವಾಗಿ ಕಾರ್ಯಕ್ರಮದ ದಿನದಂದು ಆಗಮಿಸಿಯೂ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

45000 ಉದ್ಯೋಗ ದೊರೆಯುವ ನಿರೀಕ್ಷೆ
ಉದ್ಯೋಗ ಮೇಳದಲ್ಲಿ 221 ಕಂಪನಿಗಳು ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿದೆ. ಸುಮಾರು 45000 ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಸರು ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿದ ನಂತರ ಉದ್ಯೋಗ ಸಿಗದೇ ಇರುವ ಅಭ್ಯರ್ಥಿಗಳ ವಿವರವನ್ನು ಸಹ ಪಡೆದುಕೊಂಡು ಅವರಿಗೆ ಬೇಕಿರುವ ಕೌಶಲ್ಯಗಳ ಬಗ್ಗೆ ತರಬೇತಿಯನ್ನು ನೀಡಲಾಗುವುದು.

ಉದ್ಯೋಗ ಮೇಳದ ಯಶಸ್ವಿ
ಈ ಹಿಂದೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಸಿದ 6 ಉದ್ಯೋಗ ಮೇಳದಲ್ಲಿ 12966 ಅಭ್ಯರ್ಥಿಗಳು ಉದ್ಯೋಗ ಪಡೆದುಕೊಂಡಿದ್ದಾರೆ. ಕಾಲೇಜುಗಳ ಸಹಯೋಗದೊಂದಿಗೆ ನಡೆಸಿದ 3 ಉದ್ಯೋಗ ಮೇಳದಲ್ಲಿ 1177 ಅಭ್ಯರ್ಥಿಗಳಿಗೆ ಉದ್ಯೋಗ ದೊರೆತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

51 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

53 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

56 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

59 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

1 hour ago