ಮೈಸೂರು

ನಾಳೆ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಮೈಸೂರು : ರಾಜ್ಯದಲ್ಲಿ ಉದ್ಯೋಗ ಕ್ರಾಂತಿ ಉಂಟು ಮಾಡಲು ಸಂಕಲ್ಪ ತೊಟ್ಟ ಕೌಶಲ್ಯಾಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಕಡೆಗಳಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಶುಕ್ರವಾರ ಸಾಂಸ್ಕೃತಿಕ ರಾಜಧಾನಿಯಲ್ಲಿ “ಬೃಹತ್‌ ಉದ್ಯೋಗ ಮೇಳ” ಆಯೋಜಿಸಿದೆ.

ಮೈಸೂರಿನ ಜಿಲ್ಲೆಯ ಮಹಾರಾಜ ಕಾಲೇಜು‌ ಮೈದಾನದಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ 24000 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 221 ಕಂಪನಿಗಳು ಭಾಗವಹಿಸಲಿದೆ. ಉದ್ಯೋಗ ಮೇಳದ ಕುರಿತು ಮಾಹಿತಿ ಪಡೆದುಕೊಂಡಿರುವ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಆರ್‌ ಪಾಟೀಲ್, ಆಕಾಂಕ್ಷಿಗಳಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದ್ದಾರೆ.

ಇದನ್ನು ಓದಿ: ಅಕ್ಟೋಬರ್.‌17ರಂದು ಮೈಸೂರಿನಲ್ಲಿ ಬೃಹತ್‌ ಉದ್ಯೋಗ ಮೇಳ: ಸಚಿವ ಡಾ.ಶರಣ ಪ್ರಕಾಶ್‌ ಆರ್ ಪಾಟೀಲ್

ನೋಂದಣಿ ಮಾಡಿಕೊಳ್ಳಿ
ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೇರವಾಗಿ ಕಾರ್ಯಕ್ರಮದ ದಿನದಂದು ಆಗಮಿಸಿಯೂ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

45000 ಉದ್ಯೋಗ ದೊರೆಯುವ ನಿರೀಕ್ಷೆ
ಉದ್ಯೋಗ ಮೇಳದಲ್ಲಿ 221 ಕಂಪನಿಗಳು ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿದೆ. ಸುಮಾರು 45000 ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಸರು ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿದ ನಂತರ ಉದ್ಯೋಗ ಸಿಗದೇ ಇರುವ ಅಭ್ಯರ್ಥಿಗಳ ವಿವರವನ್ನು ಸಹ ಪಡೆದುಕೊಂಡು ಅವರಿಗೆ ಬೇಕಿರುವ ಕೌಶಲ್ಯಗಳ ಬಗ್ಗೆ ತರಬೇತಿಯನ್ನು ನೀಡಲಾಗುವುದು.

ಉದ್ಯೋಗ ಮೇಳದ ಯಶಸ್ವಿ
ಈ ಹಿಂದೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಸಿದ 6 ಉದ್ಯೋಗ ಮೇಳದಲ್ಲಿ 12966 ಅಭ್ಯರ್ಥಿಗಳು ಉದ್ಯೋಗ ಪಡೆದುಕೊಂಡಿದ್ದಾರೆ. ಕಾಲೇಜುಗಳ ಸಹಯೋಗದೊಂದಿಗೆ ನಡೆಸಿದ 3 ಉದ್ಯೋಗ ಮೇಳದಲ್ಲಿ 1177 ಅಭ್ಯರ್ಥಿಗಳಿಗೆ ಉದ್ಯೋಗ ದೊರೆತಿದೆ.

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

1 hour ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

5 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

21 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

22 hours ago