ಮೈಸೂರು

ಹುಲ್ಲಹಳ್ಳಿ | ಕುಡಿಯುವ ನೀರಿಗಾಗಿ ಪರದಾಟ

ನಂಜನಗೂಡು : ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಜನರು ಕುಡಿಯುವ ನೀರಿಗಾಗಿ ಮೂರು ದಿನಗಳಿಂದ ತೀವ್ರ ಪರದಾಡುವಂತಾಗಿದೆ. ಸನಿಹದಲ್ಲೇ ಕಪಿಲಾ ನದಿ ಹರಿಯುತ್ತಿದ್ದರೂ ಗ್ರಾಮದ ಜನರು ಕುಡಿಯುವ ನೀರಿಲ್ಲದೇ ನಿತ್ಯ ನರಕ ಅನುಭವಿಸುತ್ತಿದ್ದಾರೆ.

ಹುಲ್ಲಹಳ್ಳಿ ಗ್ರಾಮದ ಕಪಿಲಾ ನದಿಯಿಂದ ಗುಂಡ್ಲುಪೇಟೆ ತಾಲ್ಲೂಕಿನ 136 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ, ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದಿಂದ ಹುಲ್ಲಹಳ್ಳಿ ಗ್ರಾಮದಲ್ಲಿ ಕಪಿಲಾ ನದಿ ಹರಿಯುತ್ತಿದ್ದರೂ ಜನರು ನೀರಿಲ್ಲದೇ ಪರದಾಡುತ್ತಿದ್ದಾರೆ.

ಗ್ರಾಮದ 6, 7ನೇ ವಾರ್ಡಿನಲ್ಲಿ ಸತತ ಮೂರು ತಿಂಗಳಿಂದ ಕುಡಿಯುವ ನೀರಿಗಾಗಿ ಜನ‌‌ ಪರದಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ ಪ್ರಯೋಜನ ಇಲ್ಲದಂತಾಗಿದ್ದು, ಜನರ ಸಮಸ್ಯೆಗೆ ಇಲ್ಲಿನ ಆಡಳಿತ ಕ್ಯಾರೇ ಎನ್ನುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: 24 ರೂ. ಹಿಡಿದು ಮುಂಬೈಗೆ ಬಂದ ಮುನ್ನಾ ಈಗ ಸೆಲೆಬ್ರೆಟಿ ಫೋಟೋಗ್ರಾಫರ್!

ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…

2 hours ago

ಟಿ-20 ವಿಶ್ವಕಪ್: ಕೌಂಟ್‌ಡೌನ್ ಶುರು

ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್‌ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು.…

2 hours ago

ಕೊಡಗು ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಸೈಬರ್ ವಂಚನೆ..!

ಕೃಷ್ಣ ಸಿದ್ದಾಪುರ ಪೊಲೀಸರು ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನರು ಹೂಡಿಕೆ ಹಣ ದೋಚುತ್ತಿರುವ ಖದೀಮರು  ಸಿದ್ದಾಪುರ: ಸೈಬರ್ ಅಪರಾಧ ಪ್ರಕರಣಗಳ…

3 hours ago

ಫೆ.6ರಂದು ಮಹದೇಶ್ವರ ದೇವಾಲಯದ ಉದ್ಘಾಟನೆ

ಎಂ.ಯೋಗಾನಂದ್ ಹಿರಿಕ್ಯಾತನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇಗುಲ; ಭಕ್ತರಿಂದ ಅನ್ನಸಂತರ್ಪಣೆ  ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮಹದೇಶ್ವರ…

3 hours ago

ರೈಲ್ವೆ ಕಂಬಿಗಳಿಗೆ ತಂತಿ ಜಾಲರಿ ಅಳವಡಿಕೆ ಪ್ರಯೋಗ ಯಶಸ್ವಿ

ಮಂಜು ಕೋಟೆ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ; ರೈತರು, ಸಾರ್ವಜನಿಕರು ನಿರಾಳ  ಎಚ್.ಡಿ.ಕೋಟೆ: ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಗಟ್ಟಲು…

3 hours ago

ಕ್ಯಾನ್ಸರ್ ಚಿಂತೆ ಬಿಡಿ, ಚಿಕಿತ್ಸೆ ಬಗ್ಗೆ ಗಮನ ಕೊಡಿ

ಫೋನ್ ಇನ್ ಕಾರ್ಯಕ್ರಮಲ್ಲಿ ಭಾರತ್ ಕ್ಯಾನ್ಸರ್ ಆಸ್ಪತ್ರೆ ವೈದ್ಯರಿಂದ ಹಲವು ಸಲಹೆ  ಕುಮಾರ್, ಬೆಂಗಳೂರು: ರೊಬೊಟಿಕ್ಸ್ ಶಸಚಿಕಿತ್ಸೆಗೂ, ಸಾಮಾನ್ಯ ಶಸ್ತ್ರಚಿಕಿತ್ಸೆಗೂ ಇರುವ…

3 hours ago