ಮೈಸೂರು: ಶೌಚಾಲಯ ಗುಂಡಿಯಲ್ಲಿ ಮನುಷ್ಯನ ಬುರುಡೆ, ಮೂಳೆಗಳು ಪತ್ತೆಯಾಗಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಚಿನ್ನಪ್ಪ ಪಾಳ್ಯ ಗ್ರಾಮದಲ್ಲಿ ನಡೆದಿದೆ.
ದಾಸಪ್ರಕಾಶ್ ಎಂಬುವವರ ಮನೆಯ ಹಿತ್ತಲಿನ ಶೌಚಾಲಯದ ಗುಂಡಿಯಲ್ಲಿ ಮನುಷ್ಯನ ಬುರುಡೆ, ಮೂಳೆಗಳು ಪತ್ತೆಯಾಗಿವೆ.
ಶೌಚಾಲಯ ಗುಂಡಿ ಕುಸಿದು ಬಿದ್ದ ಹಿನ್ನಲೆಯಲ್ಲಿ ದುರಸ್ತಿ ಕಾರ್ಯ ನಡೆಸುವ ವೇಳೆ ಶೌಚಾಲಯದ ಗುಂಡಿ ಒಳಗೆ ಮೂಳೆಗಳು ಪತ್ತೆಯಾಗಿವೆ. ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸರ್ಕಲ್ ಇನ್ ಸ್ಪೆಕ್ಟರ್ ಶಬೀರ್ ಹುಸೇನ್, ಡಿವೈಎಸ್ಪಿ ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಾಸಪ್ರಕಾಶ ಮತ್ತು ತಂದೆ ಜೇಕಬ್ ಮನೆಯಲ್ಲಿ ವಾಸವಾಗಿದ್ದರು. ಜೇಕಬ್ ಸಾಯುವ ಮೂರ್ನಾಲ್ಕು ತಿಂಗಳ ಹಿಂದೆಯೇ ದಾಸಪ್ರಕಾಶ್ ಸತ್ತಿರುವ ಶಂಕೆ ವ್ಯಕ್ತವಾಗಿದೆ.
ದಾಸಪ್ರಕಾಶ್ಗೆ ಹೆಂಡತಿ ಹಾಗೂ ಮಕ್ಕಳಿದ್ದಾರೆ. ಅವರನ್ನು ಸರಿಯಾಗಿ ನೋಡಿಕೊಳ್ಳದ ಕಾರಣ ಅವರು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಾರೆ. ದಾಸ್ಪ್ರಕಾಶ್ ನಾಪತ್ತೆಯಾದರೂ ತಂದೆ ಜೇಕಬ್ ಹಾಗೂ ಪತ್ನಿ ಪ್ರಿಯಾ ದೂರು ನೀಡಿರಲಿಲ್ಲ.
ತಂದೆ ಜೊತೆ ಅನ್ಯೋನ್ಯವಾಗಿದ್ದ ದಾಸಪ್ರಕಾಶ್ ತಂದೆ ನಿಧನವಾದಾಗ ಬಂದಿರಲಿಲ್ಲ. ಇದೀಗ ಮನೆಯ ಶೌಚಾಲಯದ ಟ್ಯಾಂಕ್ ಕ್ಲೀನ್ ಮಾಡುವಾಗ ಮನುಷ್ಯನ ಮೂಳೆ, ಬುರುಡೆ ಸಿಕ್ಕಿದ್ದು ಸಾವಿನ ಸುತ್ತು ಅನುಮಾನ ಹೆಚ್ಚಾಗಿದೆ.
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…
ಮೈಸೂರು: ನಗರದ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಳ್ಳಿಕಾರ್ ಹೋರಿಯ ಮೇಲೆ ಕಾಡಾನೆ…
ಆನೇಕಲ್: ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ…
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದಲ್ಲಿ…
ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…