ಮೈಸೂರು: ಶೌಚಾಲಯ ಗುಂಡಿಯಲ್ಲಿ ಮನುಷ್ಯನ ಬುರುಡೆ, ಮೂಳೆಗಳು ಪತ್ತೆಯಾಗಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಚಿನ್ನಪ್ಪ ಪಾಳ್ಯ ಗ್ರಾಮದಲ್ಲಿ ನಡೆದಿದೆ.
ದಾಸಪ್ರಕಾಶ್ ಎಂಬುವವರ ಮನೆಯ ಹಿತ್ತಲಿನ ಶೌಚಾಲಯದ ಗುಂಡಿಯಲ್ಲಿ ಮನುಷ್ಯನ ಬುರುಡೆ, ಮೂಳೆಗಳು ಪತ್ತೆಯಾಗಿವೆ.
ಶೌಚಾಲಯ ಗುಂಡಿ ಕುಸಿದು ಬಿದ್ದ ಹಿನ್ನಲೆಯಲ್ಲಿ ದುರಸ್ತಿ ಕಾರ್ಯ ನಡೆಸುವ ವೇಳೆ ಶೌಚಾಲಯದ ಗುಂಡಿ ಒಳಗೆ ಮೂಳೆಗಳು ಪತ್ತೆಯಾಗಿವೆ. ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸರ್ಕಲ್ ಇನ್ ಸ್ಪೆಕ್ಟರ್ ಶಬೀರ್ ಹುಸೇನ್, ಡಿವೈಎಸ್ಪಿ ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಾಸಪ್ರಕಾಶ ಮತ್ತು ತಂದೆ ಜೇಕಬ್ ಮನೆಯಲ್ಲಿ ವಾಸವಾಗಿದ್ದರು. ಜೇಕಬ್ ಸಾಯುವ ಮೂರ್ನಾಲ್ಕು ತಿಂಗಳ ಹಿಂದೆಯೇ ದಾಸಪ್ರಕಾಶ್ ಸತ್ತಿರುವ ಶಂಕೆ ವ್ಯಕ್ತವಾಗಿದೆ.
ದಾಸಪ್ರಕಾಶ್ಗೆ ಹೆಂಡತಿ ಹಾಗೂ ಮಕ್ಕಳಿದ್ದಾರೆ. ಅವರನ್ನು ಸರಿಯಾಗಿ ನೋಡಿಕೊಳ್ಳದ ಕಾರಣ ಅವರು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಾರೆ. ದಾಸ್ಪ್ರಕಾಶ್ ನಾಪತ್ತೆಯಾದರೂ ತಂದೆ ಜೇಕಬ್ ಹಾಗೂ ಪತ್ನಿ ಪ್ರಿಯಾ ದೂರು ನೀಡಿರಲಿಲ್ಲ.
ತಂದೆ ಜೊತೆ ಅನ್ಯೋನ್ಯವಾಗಿದ್ದ ದಾಸಪ್ರಕಾಶ್ ತಂದೆ ನಿಧನವಾದಾಗ ಬಂದಿರಲಿಲ್ಲ. ಇದೀಗ ಮನೆಯ ಶೌಚಾಲಯದ ಟ್ಯಾಂಕ್ ಕ್ಲೀನ್ ಮಾಡುವಾಗ ಮನುಷ್ಯನ ಮೂಳೆ, ಬುರುಡೆ ಸಿಕ್ಕಿದ್ದು ಸಾವಿನ ಸುತ್ತು ಅನುಮಾನ ಹೆಚ್ಚಾಗಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…